June 9, 2026

Sampoorna News

Emerging Kannada News

Latestಚುನಾವಣೆ-Electionರಾಷ್ಟ್ರೀಯ-National

ಕ್ರಿಮಿನಲ್‌ಗಳು ಜೈಲಿಗೆ ಹೋಗಲು ಹೆದರುತ್ತಿದ್ದಾರೆ: ಯೋಗಿ ಅದಿತ್ಯನಾಥ್

ಲಕ್ನೊ: ಉತ್ತರ ಪ್ರದೇಶದಲ್ಲಿ ಈಗ ಕ್ರಿಮಿನಲ್‌ಗಳೂ ಜೈಲಿಗೆ ಹೋಗಲು ಹೆದರಿಕೊಳ್ಳುತ್ತಿದ್ದಾರೆ ಎಂದು ಸಿಎಂ ಯೋಗಿ ಅದಿತ್ಯನಾಥ್ ಹೇಳಿದ್ದಾರೆ.

ಶಂಸಾಬಾದ್‌ನಲ್ಲಿ ಬಿಜೆಪಿಉ ಅಭ್ಯರ್ಥಿ ಪರ ಮತ ಪ್ರಚಾರ ನಡೆಸಿ ಮಾತನಾಡಿದ ಅವರು, ನಾವು ಶೂನ್ಯ ಸಹಿಷ್ಣುತೆಯ ನೀತಿಯನ್ನು ಅನುಸರಿಸುತ್ತಿದ್ದೇವೆ. ಕ್ರಿಮೆನೆಲ್ ವುಕ್ತಿಗಳು ಅಪರಾಧ9ವನ್ನು ನಿಲ್ಲಿಸಬೇಕು ಅಥವಾ ಅದಕ್ಕೆ ತಕ್ಕುವಾದ ಬೆಲೆಯನ್ನು ಪಾವತಿಸಲು ಸಿದ್ದರಾಗಬೇಕು. ಈಗ ಬಹುತೆಕ ಕ್ರಿಮಿನೆಲಗಳು ಜೈಲಿಗೆ ಹೋಗಲು ಭಯಪಡುತ್ತಿದ್ದಾರೆ ಎಂದು ಹೇಳಿದ್ದಾರೆ . ಇದನ್ನೂ ಓದಿ:  ಮನೆಯೊಂದರ ಕಪಾಟಿನಲ್ಲಿ ಮಹಿಳೆಯ ಶವ ಪತ್ತೆ, ಲೈವ್- ಇನ್ ಸಂಗಾತಿ ಮೇಲೆ ಅನುಮಾನ

https://youtu.be/0Nyx7Oqxwo4?si=8w-6Etbcywbk7add

ಕಳೆದ ವಾರ ಬಂದಾ ಜೈಲಿನಲ್ಲಿ ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿ ಸಾವನ್ನಪ್ಪಿದ ನಂತರ ಈ ಹೇಳಿಕೆ ಬಂದಿರುವುದು ವಿಶೇಷ. ಕುಟುಂಬಸ್ಥರು ವಿಷ ಪ್ರಾಶನ ಮಾಡಿ ಅನ್ಸಾರಿಯನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿದ್ದರೆ ಹೃದಯಾಘಾತದಿಂದ ಸಾವಾಗಿದೆ ಎಂದು ಮರಣೋತ್ತರ ಪರೀಕ್ಷೆ ವರದಿ ನೀಡಿದೆ. ಇದನ್ನೂ ಓದಿ:  ಅರವಿಂದ್ ಕೇಜ್ರಿವಾಲ್ ದೆಹಲಿ ಸಿಎಂ ಆಗಿ ಮಂದುವರೆಯಲಿ ಎಂದ ಹೈಕೋರ್ಟ್

https://youtu.be/ODS2Izo8Lsk?si=7a-6bGkJhfwLmVGb

2017ರ ಮೊದಲು ಪೊಲೀಸ್ ಠಾಣೆಗಳು ಸರ‍್ಯಾಸ್ತದ ನಂತರ ಬೀಗ ಹಾಕುತ್ತಿದ್ದವು. ಸಾಮಾನ್ಯ ಜನರು ಭಯಭೀತರಾಗಿದ್ದರು. ಉತ್ತರ ಪ್ರದೇಶದಲ್ಲಿ ರ‍್ಕಾರ ಬದಲಾಯಿತು ಆದರೆ ಅಪರಾಧಿಗಳು ಮೊದಲಿನಂತೆಯೇ ಇರುತ್ತದೆ ಎಂದು ಭಾವಿಸಿದ್ದರು. ನಾವು ನಮ್ಮ ರಾಜ್ಯದಲ್ಲಿ ಅಪರಾಧದ ಬಗ್ಗೆ ‘ಶೂನ್ಯ ಸಹಿಷ್ಣುತೆ’ ನೀತಿಯನ್ನು ತಂದಿದ್ದೇವೆ. ಕ್ರಿಮಿನಲ್‌ಗಳು ಸುಧಾರಣೆಯಾಗಬೇಕು ಅಥವಾ ಅವರು ಬೆಲೆ ತೆರುವ ಆಯ್ಕೆಯನ್ನು ನೀಡಲಾಗಿದೆ ಎಂದು ಯೋಗಿ ಹೇಳಿದರು. ಇದನ್ನೂ ಓದಿ:  ಎನ್‌ಡಿಎ ಅಭ್ಯರ್ಥಿ ಡಾ.ಸಿಎನ್ ಮಂಜುನಾಥ್ ನಾಮಪತ್ರ ಸಲ್ಲಿಕೆ: ಬೆಂಗಳೂರು ಗ್ರಾಮಾಂತರ

https://youtu.be/qr5SSnfxj7I?si=U_wyldi3WVdbujZA

Leave a Reply

Your email address will not be published. Required fields are marked *