BlogLatestರಾಜ್ಯ-Karnataka

ನನ್ನ ಮಗ ತಪ್ಪು ಮಾಡಿದ್ರೆ ಗಲ್ಲಿಗೇರಿಸಲಿ : ಹೆಚ್​ಡಿ ರೇವಣ್ಣ ರೋಷಾವೇಶ

ಬೆಂಗಳೂರು: ನನ್ನ ಮಗ ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ ನಾನು ಬೇಡ ಅನ್ನಲ್ಲ. ನಾನು ವಹಿಸಿಕೊಳ್ಳಲು ಇಲ್ಲಿಗೆ ಬಂದಿಲ್ಲ ಎಂದು ಸದನದಲ್ಲಿ ಗದ್ಗದಿತರಾದಂತಾಗಿ ಏರುಧ್ವನಿಯಲ್ಲಿ ಮಾತನಾಡಿದ್ದಾರೆ.

ವಿಧಾನಸಭೆಯಲ್ಲಿ ಚರ್ಚೆ ವೇಳೆ ಪ್ರಜ್ವಲ್​ ರೇವಣ್ಣ ಅರೆಸ್ಟ್ ಆದ ಬಗ್ಗೆ ಪ್ರಸ್ತಾಪವಾಗಿದ್ದು, ಈ ವೇಳೆ ಹೆಚ್​ಡಿ ರೇವಣ್ಣ ಸಿಟ್ಟಿಗೆದ್ದ ಘಟನೆ ನಡೆದಿದೆ. ನನ್ನ ಮಗ ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ ನಾನು ಬೇಡ ಅನ್ನಲ್ಲ. ಎಂದು ಸದನದಲ್ಲಿ ಗದ್ಗದಿತರಾದರು.

ನನ್ನ ಮೇಲೆ ಯಾರೋ ಆರೋಪ ಮಾಡ್ತಿದ್ದಾರೆ. ಹೆಣ್ಣು ಮಗಳನ್ನು ಕರೆದುಕೊಂಡು ಬಂದು ಡಿಜಿ ಕಚೇರಿಯಲ್ಲಿ ಡಿಜಿ ದೂರು ಬರೆಸಿಕೊಳ್ಳುತ್ತಾನೆ ಅಂದರೆ ಅವನು ಡಿಜಿ ಆಗಲು ಲಾಯಕ್ಕಾ? ಎಂದು ಸದನದಲ್ಲಿ ಗದ್ಗದಿತರಾದಂತಾಗಿ ಏರುಧ್ವನಿಯಲ್ಲಿ ರೇವಣ್ಣ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಬಹಳ ಅನ್ಯಾಯ ಆಗಿದ್ದರೆ ನೊಟೀಸ್ ಕೊಡಿಸಿ ಚರ್ಚೆ ಮಾಡೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

Share with Friends
author avatar
News Desk