Blogರಾಜ್ಯ-Karnataka

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿಗಳಿಗೆ 6 ವರ್ಷದ ಬಳಿಕ ಜಾಮೀನು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ (ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ.ನ್ಯಾ.ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ 6 ವರ್ಷದ ಬಳಿಕ ನವೀನ್ ಕುಮಾರ್, ಅಮಿತ್, ಎಚ್‌ಎಲ್ ಸುರೇಶ್ ಅವರಿಗೆ ಜಾಮೀನು ನೀಡಿದೆ.

ಗೌರಿ ಲಂಕೇಶ್‌ ಕೊಲೆ ಪ್ರಕರಣದಲ್ಲಿ ಆರೋಪಿಗಳು ಆರು ವರ್ಷಗಳಿಂದ ಜೈಲಿನಲ್ಲಿದ್ದಾರೆ. ಪ್ರಕರಣದ ವಿಚಾರಣೆ ಮುಗಿಯದೇ ಇರುವುದರಿಂದ ದೀರ್ಘಕಾಲ ಅವರನ್ನು ಜೈಲಿನಲ್ಲಿ ಇಡುವಂತಿಲ್ಲ ಎಂದು ಅಭಿಪ್ರಾಯಪಟ್ಟಿರುವ ಪೀಠ, ಜಾಮೀನು ಮಂಜೂರು ಮಾಡಿದೆ.

ಹಿರಿಯ ವಕೀಲ ಅರುಣ್‌ ಶಾಮ್‌, ಮಧುಕರ್‌ ದೇಶಪಾಂಡೆ, ಬಸವರಾಜ್‌ ಸಪ್ಪಣ್ಣನವರ್‌ ಆರೋಪಿಗಳ ಪರ ವಾದ ಮಂಡಿಸಿದರು. ಈ ಪ್ರಕರಣದಲ್ಲಿ ಈ ಹಿಂದೆ ಆರೋಪಿ ಎ11 ಮೋಹನ್‌ ನಾಯಕ್‌ಗೆ ಮಾತ್ರ ಜಾಮೀನು ದೊರೆತಿತ್ತು.

ಆರೋಪಿಗಳ ಪರ ಹಿರಿಯ ವಕೀಲ ಅರುಣ್ ಶ್ಯಾಂ ವಾದ ಮಂಡಿಸಿದ್ದರು. ಕೋರ್ಟ್‌ ಹಲವು ಷರತ್ತು ವಿಧಿಸಿದ್ದು ಈ ಷರತ್ತು ಪೂರ್ಣಗೊಂಡ ಬಳಿಕ ಇಂದು ಸಂಜೆ ಅಥವಾ ನಾಳೆ ಆರೋಪಿಗಳು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

Share with Friends
author avatar
News Desk