Latestರಾಷ್ಟ್ರೀಯ-National

ಬಿಆರ್‌ಎಸ್ ನಾಯಕಿ ಕವಿತಾ 3 ದಿನ ಸಿಸಿಬಿ ಕಸ್ಟಡಿಗೆ

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣದಲ್ಲಿ ಬಂಧನಕ್ಕೊಲಗಾಗಿರುವ ಭಾರತೀಯ ರಾಷ್ಟçಸಮಿತಿ ನಾಯಲಿ ಕೆ.ಕವಿತಾ ಅವರನ್ನು 3 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಕಳುಹಿಸಲಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರನದಲ್ಲಿ ಇತ್ತಿಚೆಗೆ ದೆಹಲಿಯ ತಿಹಾರ್ ಜೈಲಿನಿಂದಲೇ ಕವಿತಾ ಅವರನ್ನು ಸಿಸಿಬಿ ವಶಕ್ಕೆ ಪಡೆದಿತ್ತು. ನಂತರ ಕೋರ್ಟ್ ಮುಂದೆ ಹಾಜರು ಪಡಿಸಲಾಗಿತ್ತು. ಕವಿತಾ ಅವರನ್ನು ಏ.15 ರ ವರೆಗೆ ಸಿಸಿಬಿ ಕಸ್ಟಡಿಗೆ ವಹಿಸಿ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಆದೇಶ ಹೊರಡಿಸಿದೆ. ಇದನ್ನೂ ಓದಿ: ದೆಹಲಿ ಮುಖ್ಯ ಕಾರ್ಯದರ್ಶಿ ವಿರುದ್ಧ ಎಫ್‌ಐಆರ್

https://youtu.be/j_YYSaW61_c?si=CD-vQVhgGSKHOjTj

46 ವಯಸ್ಸಿನ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಅವರ ಸಹೋದರ ಹಾಗೂ ತೆಲಂಗಾಣ ಮಾಜಿ ಸಚಿವೆ ಕೆ.ಟಿ.ರಾಮರಾವ್ ಅವರು ಇಡಿ ಅಧಿಕಾರಿಗಳ ವಿರುದ್ದ ವಾದ ಮಂಡಿಸಿದ್ದರು. ಇದನ್ನೂ ಓದಿ: ಸಿಂಗಂ 2 ವಿಲನ್ ಅರುಳ್ ಮಣಿ ಹೃದಯಾಘಾತದಿಂದ ನಿಧನ

https://youtu.be/AJtxmiMwIq8?si=s7E24AkhrK3mZvQm


ಬಳಿಕ ಪೊಲೀಸರು ಕವಿತಾ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡೆಸಲಾಗಿತ್ತು. ತಿಹಾರ್‌ ಜೈಲಿನಲ್ಲಿರುವಾಗಲೇ ಮತ್ತೊಂದು ಪ್ರಕರಣದಲ್ಲಿ ಗುರುವಾರ ಸಂಜೆ ಸಿಬಿಐ ಅವರನ್ನು ಬಂಧಿಸಿತು. ಮದ್ಯದ ಪರವಾನಿಗೆಗಾಗಿ ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೆ 100 ಕೋಟಿ ರೂ. ಲಂಚ ನೀಡುವ ಸಂಬಂಧ ಸಾಕ್ಷಿ ಹೇಳಿಕೆಗಳು, ವಾಟ್ಸಾಪ್ ಚಾಟ್‌ಗಳು ಮತ್ತು ಹಣಕಾಸಿನ ದಾಖಲೆಗಳು ಅವರನ್ನು ಸಂಚು ರೂಪಿಸಿದವರಲ್ಲಿ ಪ್ರಮುಖರೆಂದು ವಾದಿಸಿ, ಐದು ದಿನಗಳ ಕಾಲ ಕವಿತಾ ಅವರನ್ನು ಸಿಬಿಐ ಕಸ್ಟಡಿಗೆ ಕೋರಿತ್ತು. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬರ್‌ ಆರೆಸ್ಟ್- ಕೋಡ್‌ವರ್ಡ್‌ ಸಹಾಯದಿಂದ ಬಾಂಬ್‌ಬ್ಲಾಸ್ಟ್‌

Share with Friends
author avatar
News Desk