BlogWeatherರಾಜ್ಯ-Karnataka

ಇನ್ನೂ 2 ದಿನ ಮಳೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕಳೆದ 24 ಗಂಟೆಯಲ್ಲಿ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ. ಮುಂದಿನ 5 ದಿನಗಳ ಕಾಲ ಮತ್ತಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಶಿವಮೊಗ್ಗ, ಚಿಕ್ಕಮಂಗಳೂರು, ಕೋಲಾರ, ಬೆಂಗಳೂರು, ದಾವಣಗೆರೆ, ರಾಮನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

21 ರಿಂದ 23 ರವರೆಗೆ ವ್ಯಾಪಕವಾಗಿ ಮಳೆಯಾಗಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿಗೆ ಅಕ್ಟೋಬರ್ 21 ರಿಂದ 23 ರವರೆಗೆ ಹಲವು ಕಡೆ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಅಕ್ಟೋಬರ್ 21 ರಿಂದ 23 ರವರೆಗೆ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕದರ ಉತ್ತರ ಕನ್ನಡ ಜಿಲ್ಲೆಯಲ್ಲಿ 11 ಸೆಂಮೀ, ಕುಂದಾಪುರದಲ್ಲಿ 9 ಸೆಂಮೀ, ಶಿಗ್ಗಾಂವ್ 10 ಸೆಂಮೀ, ಹೊನ್ನಾಳಿ ದಾವಣಗೆರೆಯಲ್ಲಿ 8 ಸೆಂಮೀ ಮಳೆಯಾಗಿದೆ.

Share with Friends
author avatar
News Desk