Crime NewsLatestರಾಷ್ಟ್ರೀಯ-National

ಕಂದಕಕ್ಕೆ ಬಸ್‌ ಉರುಳಿ 22 ಮಂದಿ ಸಾವು – ಪಿಎಂ ಸಂತಾಪ

-ಮೃತರ ಕುಟುಂಬಕ್ಕೆ ತಲಾ 7 ಲಕ್ಷ ರೂ. ಪರಿಹಾರ ಘೋಷಣೆ!

ಶ್ರೀನಗರ: ಯಾತ್ರಿಕರಿದ್ದ ಬಸ್‌ವೊಂದು (Bus) ಕಂದಕಕ್ಕೆ ಉರುಳಿ ಬಿದ್ದಿದ್ದು (Bus Accident) ಮೃತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಇನ್ನೂ ಘಟನೆಯಲ್ಲಿ 70ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಘಟನೆ ಸಂಭವಿಸಿದ ಕೆಲವೇ ಸಮಯದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಬಸ್‌ ಉತ್ತರ ಪ್ರದೇಶದ (uttar pradesh) ಹತ್ರಾಸ್‌ನಿಂದ ಯಾತ್ರಿಕರನ್ನು ಹೊತ್ತೊಯ್ಯುತ್ತಿತ್ತು. ಇದೇ ವೇಳೆ ಜಮ್ಮುವಿನ ಅಖ್ನೂರ್ (Akhnoor) ತಾಂಡಾ ಬಳಿ ಬಸ್ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಓಟ್ಟು 22 ಮಂದಿ ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಜನ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಮ್ಮುವಿನ ಉಪಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

ತೀವ್ರ ಸಂತಾಪ ವ್ಯಕ್ತಪಡಿಸಿದ ಪ್ರಧಾನಿ
ಇನ್ನೂ ಘಟನೆ ನೆನೆದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಖ್ನೂರ್‌ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಸಂಭವಿಸಿದ ಜೀವಹಾನಿ ಅತೀವವಾದ ನೋವನ್ನುಂಟು ಮಾಡಿದೆ ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಇದೇ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹ ಸಂತಾಪ ಸೂಚಿಸಿದ್ದಾರೆ.

https://youtu.be/NjDFYrxzGPQ?si=V_mfF6W7yuiexgJ2

ಜೆ&ಕೆ ರಾಜ್ಯಪಾಲರಿಂದ 5 ಲಕ್ಷ ರೂ. ಪರಿಹಾರ ಘೋಷಣೆ:
ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ ತಲಾ 2 ಲಕ್ಷ ರೂ. ಹೊರತುಪಡಿಸಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಸಹ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

https://youtu.be/7yBIMPkTX5U?si=zIwwgL9FvaRUuldm
Share with Friends
author avatar
News Desk