Crime NewsLatestರಾಜ್ಯ-Karnatakaವಿಜಯಪುರ-Vijayapura

ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದಲ್ಲಿ 3 ಮಕ್ಕಳು ಶವವಾಗಿ ಪತ್ತೆ- FIR ದಾಖಲು

ವಿಜಯಪುರ: ಕಳೆದ ಏಪ್ರಿಲ್ 12 ರ ಮುಂಜಾನೆ ಮನೆಯಿಂದ ಒಂಟೆ (Camel) ಸವಾರಿ ನೋಡಲು ಹೋಗಿದ್ದ ಮೂವರು ಮಕ್ಕಳು, ನಗರದ ಇಂಡಿ ರಸ್ತೆಯಲ್ಲಿರುವ ಯುಜಿಡಿ ತ್ಯಾಜ್ಯ (Waste Water Treatment plant) ನೀರಿನ ಸಂಸ್ಕರಣಾ ನೀರಲ್ಲಿ ಶವವಾಗಿ ಪತ್ತೆಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಎಫ್‌ಐಆರ್ (FIR) ದಾಖಲೆಯಾಗಿದೆ.

ಪ್ರಕರಣವೇನು?
ಮೇ.12 ರಂದು ಮೂವರು ಮಕ್ಕಳು ಮನೆಯಿಂದ ಒಂಟೆ ಹುಡುಕಿಕೊಂಡು ಬರುತ್ತೇವೆ ಎಂದು ಹೇಳಿ ಹೋಗಿದ್ದರು. ಆದರೆ ಸೋಮವಾರ ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದಲ್ಲಿ ಮಕ್ಕಳು ಶವವಾಗಿ ಪತ್ತೆ ಆಗಿದ್ದರು. ಗದಗ ಮೂಲದ ಅನುಷ್ಕಾ ಅನೀಲ ದಹಿಂಡೆ (9), ವಿಜಯ ಅನಿಳ ದಹಿಂಡೆ (7) ಮತ್ತು ವಿಜಯಪುರ ಮೂಲದ ಮಿಹಿರ್ ಶ್ರೀಕಾಂತ ಜಾನಗೌಳಿ (7) ಮೃತರು. ಇವರಲ್ಲಿ ಗದಗ ಮೂಲದ ಅನುಷ್ಕಾ ಹಾಗೂ ವಿಜಯ ಬೇಸಿಗೆ ರಜೆಯ ಹಿನ್ನಲೆ ವಿಜಯಪುರದಲ್ಲಿರುವ ಮಾವನ ಮನೆಗೆ ಬಂದಿದ್ದರು. ಇದನ್ನೂ ಓದಿ: ಪ್ರೀತಿಸಿದ ಹುಡುಗಿ ಕೈ ಕೊಟ್ಟಿದಕ್ಕೆ ಯುವಕ ಆತ್ಮಹತ್ಯೆ

https://youtu.be/lwT9p6w4n0U?si=GBiJlMvEVSndPzHh

ಅದರಂತೆ ಮೊನ್ನೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ವಿಜಯಪುರದ ಚಾಬಕಸಾಬ್ ದರ್ಗಾದ ಬಳಿಯ ಮನೆಯ ಮುಂದೆ ಒಂಟೆ ಸವಾರಿ ಮಾಡಿದ್ದಾರೆ. ನಂತರ ಒಂಟೆಗಳನ್ನು ಹುಡುಕಿಕೊಂಡು ಮನೆಯಿಂದ ಹೋಗಿದ್ದರು. ಬಹಳ ಸಮಯವಾದರೂ ಮನೆಗೆ ಮಕ್ಕಳು ಬಾರದ ಕಾರಣ ಮನೆಯವರು ಸೇರಿಕೊಂಡು ಹುಡುಕಾಡಿದ್ದಾರೆ. ಬಳಿಕ ಸಂಜೆ ಹೊತ್ತಿಗೆ ಎಪಿಎಂಸಿ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾರೆ. ಆದರೆ, ನಿನ್ನೆ ಮಧ್ಯಾಹ್ನದ ವೇಳೆ ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದ ನೀರಲ್ಲಿ ಶವವಾಗಿ ಪತ್ತೆಯಾಗಿದ್ದರು. ಇದನ್ನೂ ಓದಿ: ಪೆನ್‌ಡ್ರೈವ್ ಪ್ರಕರಣ :ಲಿಖಿತ್ ಗೌಡ, ಚೇತನ್ ಜಾಮೀನು ಅರ್ಜಿ ವಜಾ

https://youtu.be/Huo-fB975OQ?si=nSGJL-C4CJSzLnvr

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಕ್ಕಳ ಪೋಷಕರು, ಈ ಘಟನೆಗೆ ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿದ್ದರು. ಈ ಹಿನ್ನಲೆ ಇದೀಗ ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೇಲೆ ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಇದನ್ನೂ ಓದಿ: ಬಿಆರ್‌ಎಸ್‌ ನಾಯಕಿ ಕೆ. ಕವಿತಾ ನ್ಯಾಯಾಂಗ ಬಂಧನ -ಮೇ 20ರವರೆಗೆ ವಿಸ್ತರಣೆ

.

Share with Friends
author avatar
News Desk