BlogEntertainmentLatestರಾಜ್ಯ-Karnataka

ದರ್ಶನ್‌ ಹಿಂಡಲಗಾ ಜೈಲಿಗೆ ಶಿಫ್ಟ್ ಆಗುವುದು ಬಹುತೇಕ ಖಚಿತ

ಬೆಂಗಳೂರು : ಜೈಲಿನಲ್ಲಿ ಐಷಾರಾಮಿಯಾಗಿ ಬದುಕುತ್ತಿದ್ದ ನಟ ದರ್ಶನ್‌ ಹಾಗೂ ಗ್ಯಾಂಗ್‌ ಹಿಂಡಲಗಾ ಜೈಲಿಗೆ ಶಿಫ್ಟ್ ಆಗುವುದು ಬಹುತೇಕ ಖಚಿತವಾಗಿದೆ. ಇದಕ್ಕಾಗಿ ಕಾನೂನು ಸಂಬಂಧಿತ ಸಂಗತಿಗಳನ್ನು ಜೈಲು ಆಧಿಕಾರಿಗಳು ಚರ್ಚೆ ಮಾಡುತ್ತಿದ್ದಾರೆ. ಶಿಫ್ಟ್‌ ಮಾಡಲು ನ್ಯಾಯಾಲಯದ ಅನುಮತಿ ಬೇಕೇ ಅಥವಾ ಜೈಲು ಆಡಳಿತವೇ ನಿರ್ಧರಿಸಬಹುದಾ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್​ ಟೀ, ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್​ ಆಗಿದೆ. ಅಲ್ಲದೇ ವಿಡಿಯೋ ಕಾಲ್​ನಲ್ಲಿ ಮಾತನಾಡಿರುವ ವಿಡಿಯೋ ತುಣುಕು ಸಹ ಬೆಳಕಿಗೆ ಬಂದಿದೆ. ಇದರೊಂದಿಗೆ ಜೈಲಿನಲ್ಲಿ ಏನೆಲ್ಲಾ ವ್ಯವಸ್ಥೆ ಎನ್ನುವುದು ಜಗಜ್ಜಾಹೀರಾಗಿದೆ. ದುಡ್ಡು ಇದ್ದರೆ ಪರಪ್ಪನ ಅಗ್ರಹಾರದಲ್ಲಿ ಕೇಳಿದ್ದು ಸಿಗುತ್ತದೆ. ಇದು ಕೇವಲ ಇದೊಂದೇ ಜೈಲಿನ ಕಥೆಯಲ್ಲ. ಇನ್ನುಳಿದ ಕರ್ನಾಟಕದ ಎಲ್ಲಾ ಜೈಲುಗಳ ಕಥೆ ಇದೆ ಆಗಿದೆ.

ಇದಕ್ಕೆ ಪೂರಕವೆಂಬಂತೆ ಮಂಗಳೂರು, ಬಳ್ಳಾರಿ ಸೆಂಟ್ರಲ್​ ಜೈಲುಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ ಮೊಬೈಲ್, ಗುಟ್ಕಾ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿರುವುದು ಉಂಟು.

ಅಷ್ಟೇ ಅಲ್ಲ ಈಗ ದರ್ಶನ್​ ಪರಪ್ಪನ ಅಗ್ರಹಾರ ಜೈಲಿನಿಂದ ಶಿಫ್ಟ್ ಆಗುತ್ತಿರುವ ಬೆಳಗಾವಿಯ ಹಿಂಡಲಗಾ ಜೈಲಿನಲ್ಲೂ ಕೇಳಿದ್ದು, ಬೆಡಿದ್ದು ಸಿಗುತ್ತದೆ. ಜೈಲಿನ ಸಿಬ್ಬಂದಿ, ಕೈದಿಗಳ ಬಳಿ ಹಣ ಪಡೆದು ಬೇಕಾದ ವ್ಯವಸ್ಥೆ ಮಾಡಿ ಕೊಡುತ್ತಾರೆ. ಈ ಸಂಬಂಧ 2021ರಲ್ಲಿ ಬರೋಬ್ಬರಿ 6 ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು.

Share with Friends
author avatar
News Desk