BlogLatestತುಮಕೂರು-Tumakuruರಾಜ್ಯ-Karnataka

ತುಮಕೂರು : ಗಣೇಶನ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಮೂವರು ಸಾವು

ತುಮಕೂರು : ಗಣೇಶನ ವಿಸರ್ಜನೆಗೆ ಹೋಗಿ ನೀರಿನಲ್ಲಿ ಮುಳುಗಿ ತಂದೆ, ಮಗ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಮಾರಸಂದ್ರ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ರೇವಣ್ಣ (50), ಪುತ್ರರಾದ ಶರತ್ (20) ಹಾಗೂ ದಯಾನಂದ (28) ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ದಂಡಿನಶಿವರ ಠಾಣೆ ಪೊಲೀಸರು ಭೇಟಿ ನೀಡಿ, ಮೃತದೇಹಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಈ ಸಂಬಂಧ ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ದಯಾನಂದ್​ಗೆ ಇತ್ತೀಚೆಗಷ್ಟೇ ಮದುವೆ ಆಗಿತ್ತು ಎಂದು ತಿಳಿದುಬಂದಿದೆ.

Share with Friends
author avatar
News Desk