BlogLatestರಾಜಕೀಯ | Politics

ಪಂಚಮಸಾಲಿ ಮೀಸಲಾತಿ ನೀಡಿದರೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ 1 ಕೆಜಿ ಬಂಗಾರ ಹಾಕಿ ಸನ್ಮಾನಿಸುತ್ತೇನೆ : ನಿರಾಣಿ

ಬೆಂಗಳೂರು: ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪಂಚಮಸಾಲಿಗಳಿಗೆ ಮೀಸಲಾತಿ ಕೊಡಲಿ ಮೀಸಲಾತಿ ಕೊಟ್ಟರೆ ಲಕ್ಷ್ಮಿ ಅವರಿಗೆ ಒಂದು ಕೆಜಿ ಬಂಗಾರ ಕೊಟ್ಟು ಸನ್ಮಾನ ಮಾಡ್ತೇನೆ ಎಂದು ಮುರುಗೇಶ್ ನಿರಾಣಿ ಸವಾಲು ಹಾಕಿದ್ದಾರೆ.

ನಮ್ಮ ಸರ್ಕಾರ ಇದ್ದಾಗ ಲಕ್ಷ್ಮಿ ಅವರು 2ಎ ಮೀಸಲಾತಿ ಮಾಡಿ ಕೊಟ್ರೆ ಒಂದು ಕೆಜಿ ಕುಂದಾ ತಂದು ಸನ್ಮಾನ ಮಾಡೋದಾಗಿ ಹೇಳಿದ್ರು ನಿಮ್ಮ ಕೈಯಲ್ಲಿ ಆಗದಿದ್ರೆ ಮೂರು ತಿಂಗಳ ನಂತರ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 2ಎ ಮೀಸಲಾತಿ ಮಾಡಿಕೊಡ್ತೇವೆ ಆಗ ನೀವು ಒಂದು ಜತೆ ಬಂಗಾರದ ಬಳೆ ಮಾಡಿಸಿ ಕೊಡಿ ಅಂದಿದ್ರು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಮುರುಗೇಶ್ ನಿರಾಣಿ ಸವಾಲು ಹಾಕಿದರು.

ಈಗ ಅವರದ್ದೇ ಸರ್ಕಾರ ಬಂದು ಒಂದೂವರೆ ವರ್ಷ ಆಯ್ತು, ಈಗ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪಂಚಮಸಾಲಿಗಳಿಗೆ ಮೀಸಲಾತಿ ಕೊಡಲಿ ಮೀಸಲಾತಿ ಕೊಟ್ಟರೆ ಲಕ್ಷ್ಮಿ ಅವರಿಗೆ ಒಂದು ಕೆಜಿ ಬಂಗಾರ ಕೊಟ್ಟು ಸನ್ಮಾನ ಮಾಡ್ತೇನೆ ಎಂದರು.

Share with Friends
author avatar
News Desk