BlogLatestಮಂಡ್ಯ-Mandyaರಾಜ್ಯ-Karnataka

ಮಂಡ್ಯದಲ್ಲಿ ಬೆಳ್ಳಂಬೆಳ್ಳಗೆ ಶೂಟೌಟ್ : ಗುಂಡು‌ ಹಾರಿಸಿ ಯುವಕನ ಹತ್ಯೆಗೆ ಯತ್ನ

ಮಂಡ್ಯ: ಪತ್ನಿ‌ ಜೊತೆ ಆಕ್ರಮ ಸಂಬಂಧ ಆರೋಪ ಹಿನ್ನಲೆ ಗನ್‌ ನಿಂದ ಗುಂಡು‌ ಹಾರಿಸಿ ಯುವಕನ ಹತ್ಯೆಗೆ ಯತ್ನಸಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಶಂಭೂವಿನಹಳ್ಳಿ‌ ಗ್ರಾಮದಲ್ಲಿ ಬೆಳ್ಳಂಬೆಳ್ಳಗೆ ನಡೆದಿದೆ. ಮಂಜು(26) ಗುಂಡೇಟು ದಾಳಿಯಿಂದ ಗಾಯಗೊಂಡ ಯುವಕನಾಗಿದ್ದು, ಶಿವರಾಜು(37) ಗುಂಡು ಹಾರಿಸಿದ ಆರೋಪಿ.

ಮುಂಬೈನ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಶಿವರಾಜು ವಾರದ ಹಿಂದೆ ಗ್ರಾಮಕ್ಕೆ ಬಂದಿದ್ದ. ಲಾರಿ ಡ್ರೈವರ್‌ ಕೆಲಸ ಮಾಡುತ್ತಿದ್ದ ಮಂಜು ಜೊತೆಗೆ ಪತ್ನಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಎಂದು ಫೈರಿಂಗ್ ಮಾಡಿದ್ದಾನೆ. ಸದ್ಯ ಗಾಯಾಳು ಮಂಜುಗೆ ಮೈಸೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪಾಂಡವಪುರ ಪೊಲೀಸರು ಆರೋಪಿ ಶಿವರಾಜ್ ನನ್ನು ಬಂಧಿಸಿದ್ದಾರೆ. ಪಾಂಡವಪುರ ‌ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share with Friends
author avatar
News Desk