BlogLatestTop Storiesರಾಜ್ಯ-Karnataka

ವಿಧಾನಸಭಾ ಉಪಚುನಾವಣೆ : 2 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು : ವಿಧಾನಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು ಸಂಡೂರು (ಎಸ್.ಟಿ.ಮೀಸಲು) ಕ್ಷೇತ್ರ ಬಂಗಾರು ಹನುಮಂತು, ಶಿಗ್ಗಾಂವಿ ಕ್ಷೇತ್ರದಲ್ಲಿ ಮಾಜಿ ಸಿಎಂ ಬಸವರ್ಜ್ ಬೊಮ್ಮಾಯಿ ಪುತ್ರ ಭರತ್ ಅವರಿಗೆ ಟಿಕೆಟ್ ನೀಡಲಾಗಿದೆ. ಉಪಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳ ಪೈಕಿ ಎರಡಕ್ಕೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

ಬಿಜೆಪಿಯ ಬಸವರಾಜ ಬೊಮ್ಮಾಯಿ ಹಾಗೂ ಕಾಂಗ್ರೆಸ್ ನ ಇ.ತುಕಾರಾಂ ಅವರು ಲೋ ಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಈ ಕ್ಷೇತ್ರಗಳು ತೆರವಾಗಿದ್ದವು. ಚೆನ್ನಪಟ್ಟಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ಹಗ್ಗಜಗ್ಗಾಟ ಜೋರಾಗಿರುವ ಕಾರಣ ಈ ಕ್ಷೇತ್ರದ ಅಭ್ಯರ್ಥಿ ಇನ್ನೂ ಅಂತಿಮಗೊಂಡಿಲ್ಲ. ಚನ್ನಪಟ್ಟಣ ಕ್ಷೇತ್ರ ಜೆಡಿಎಸ್ ತೆಕ್ಕೆಗೆ ಜಾರಿದೆ ಎಂದು ಮೂಲಗಳು ಹೇಳುತ್ತಿದೆ.

ಟಿಕೆಟ್‌ಗಾಗಿ ಭಾರಿ ಹೋರಾಟ ನಡೆಸಿದ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್‌ಗೆ ತೀವ್ರ ನಿರಾಸೆಯಾಗಿದೆ. ಹೆಚ್‌ಡಿ ಕುಮಾರಸ್ವಾಮಿ ಸಂಸದರಾದ ಬಳಿಕ ರಾಜೀನಾಮೆ ನೀಡಿದ ಚನ್ನಪಟ್ಟಣ ಸ್ಥಾನಕ್ಕೆ ಇದೀಗ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ಸಾಧ್ಯತೆ ಬಹುತೇಕ ಪಕ್ಕಾ ಆಗಿದೆ.

Share with Friends
author avatar
News Desk