BlogLatestರಾಜ್ಯ-Karnataka

ಸದ್ಯಕ್ಕೆ ಸಂಪುಟ ಪುನಾರಚನೆ ಇಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್

ನವದೆಹಲಿ: ಸಂಪುಟ ವಿಸ್ತರಣೆಯ ಸಂದರ್ಭ ಬಂದಾಗ ಆಗುತ್ತದೆ. ಈಗ ಆ ಸಂದರ್ಭ ಒದಗಿ ಬಂದಿಲ್ಲವಲ್ಲ. ಒಂದು ಸಚಿವ ಸ್ಥಾನ ಖಾಲಿ ಇದ್ದು ಅದನ್ನು ತುಂಬುವ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಸಂಪುಟ ವಿಸ್ತರಣೆ ಬಗ್ಗೆ ದೆಹಲಿಯ ಕರ್ನಾಟಕ ಭವನದಲ್ಲಿ ಡಿಸಿಎಂ ಪ್ರತಿಕ್ರಿಯಿಸಿದ್ದಾರೆ. ಇನ್ನು ಕೆಪಿಸಿಸಿ ಅಧ್ಯಕ್ಷ ಗಾದಿಗೆ ನಾನೂ ಆಕಾಂಕ್ಷಿ ಎನ್ನುವ ಸಚಿವ ಕೆ.ಎನ್.ರಾಜಣ್ಣ ಹಾಗೂ ಸತೀಶ್ ಜಾರಕಿಹೊಳಿ ಅವರ ಹೆಸರು ಮುನ್ನೆಲೆಗೆ ಬಂದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಮಾಧ್ಯಮಗಳ ಮುಂದೆ ಮಾಡುವ ಚರ್ಚೆಯಿಂದ ರಾಜಕಾರಣ ನಡೆಯುವುದಿಲ್ಲ, ಮಾಧ್ಯಮಗಳ ಮುಂದೆ ರಾಜಕೀಯ ಚರ್ಚೆ ಮಾಡುವುದು ಯಾವ ಪಕ್ಷದವರಿಗೂ ಹಾಗೂ ಯಾರಿಗೂ ಸೂಕ್ತವಾದುದಲ್ಲ ಎಂದು ಹೇಳಿದರು.

ಸಂಪುಟ ಪುನಾರಚನೆಯ ಸಂದರ್ಭವೇ ಉದ್ಭವಿಸಿಲ್ಲ. ಒಂದೇ ಒಂದು ಸ್ಥಾನ ಮಾತ್ರ ಖಾಲಿ ಇದೆ. ಅದನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ಸಾಧ್ಯಾಸಾಧ್ಯತೆಗಳನ್ನು ಅಲ್ಲಗಳೆದರು.

Share with Friends
author avatar
News Desk