Blogಬೆಳಗಾವಿ-Belagaviರಾಜ್ಯ-Karnataka

ಸಿ.ಟಿ ರವಿ ಹೇಳಿದ ಪದ ಹೇಳೋದಕ್ಕೂ ಅಸಹ್ಯವಾಗುತ್ತೆ : ಕಣ್ಣೀರಿಟ್ಟಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಬೆಳಗಾವಿ : ನಾನು ಒಬ್ಬ ತಾಯಿ ಇದ್ದೀನಿ, ಅಕ್ಕ ಇದ್ದೀನಿ. ರಾಜಕಾರಣದಲ್ಲಿ ರೋಷಾವೇಶವಾಗಿ ಮಾತನಾಡಬಹುದು, ನಾನು ಯಾರಿಗೂ ಕಾಟ ಕೊಟ್ಟಿಲ್ಲ. ಆದ್ರೆ ಸಿ.ಟಿ ರವಿ ಅವರು ಹೇಳಿದ ಪದ ಹೇಳೋದಕ್ಕೂ ಅಸಹ್ಯ ಆಗುತ್ತೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಕಣ್ಣೀರಿಟ್ಟಿದ್ದಾರೆ.

ಬೆಳಗಾವಿಯಲ್ಲಿಂದು ಸಚಿವೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ನಿನ್ನೆ ಸದನದಲ್ಲಿ ಅಂಬೇಡ್ಕರ್ ಅವರ ಬಗ್ಗೆ ಅವಹೇಳನ ಖಂಡಿಸಿ ಧರಣಿ ಮಾಡುತ್ತಿದ್ದೆವು. ಧರಣಿ ಮಾಡಿ ನಾವೆಲ್ಲ ಕೂತಿದ್ದೆವು ಸಭಾಪತಿಗಳು ಅಡ್ಜರ್ನ್ ಮಾಡಿದ್ದರು. ನಾನು ನನ್ನ ಸೀಟಲ್ಲಿ ಕೂತಿದ್ದೆ ನಮ್ಮ ನಾಯಕ ರಾಹುಲ್ ಗಾಂಧಿಗೆ ಡ್ರಗ್ ಅಡಿಕ್ಟ್ ಅಂತ ಹಲವು ಬಾರಿ ಹೇಳಿದರು, ನಾನು ಸುಮ್ಮನೆ ಕುಳಿತಾಗ ಮತ್ತೆ ಹೇಳಿದರು. ಇದರಿಂದ ಸಿಟ್ಟಾಗಿ ನಾವು ಅವರ ಅಪಘಾತ ಪ್ರಕರಣ ಪ್ರಸ್ತಾಪಿಸಿದೆ. ಅದಕ್ಕೆ ಆ ಪದ ಉಪಯೋಗಿಸಿದ್ದಾರೆ. ಒಮ್ಮೆ ಅಲ್ಲ ಹತ್ತು ಬಾರಿ ಹೇಳಿದ್ದಾರೆ ಎಂದು ಕಣ್ಣೀರಿಟ್ಟಿದ್ದಾರೆ.

ರಾಜಕಾರಣದಲ್ಲಿ ರೋಷಾವೇಶವಾಗಿ ಮಾತನಾಡಬಹುದು, ಆದ್ರೆ ಸಿ.ಟಿ ರವಿ ಹೇಳಿದ ಪದ ಹೇಳೋದಕ್ಕೂ ಅಸಹ್ಯವಾಗುತ್ತೆ. ಅವರ ಪರವಾಗಿ ನಿಂತು ಎಲ್ಲರೂ ಧೃತರಾಷ್ಟ್ರರಾದ್ರು, ಡ್ರಗ್ ಅಡಿಕ್ಟ್ ಅಂದಿದ್ದಕ್ಕೆ ನೀವು ಆಕ್ಸಿಡೆಂಟ್ ಮಾಡಿ ಮೂವರ ಕೊಲೆಗಾರ ಎಂದಿದ್ದೆ. ಅದಕ್ಕೆ ಆ ರೀತಿ ಮಾತನಾಡಿದ್ದಾರೆ. ಸದನದಲ್ಲಿ ನ್ಯಾಯ ಸಿಗದ ಬಗ್ಗೆ ನಾನು ಏನೂ ಹೇಳಲ್ಲ. ನನ್ನ ಸೊಸೆ ನನ್ನ ಮಗ ನನಗೆ ಧೈರ್ಯ ತುಂಬಿದ್ದರೆಂದು ತಿಳಿಸಿದ್ದಾರೆ ಎಂದು ತಿಳಿಸಿದ್ದಾರೆ.

Share with Friends
author avatar
News Desk