Top StoriesUncategorizedಕೋಲಾರ-Kolara

ಇಂದು ಬೃಹತ್ ಕಾಂಗ್ರೆಸ್ ಸಾಧನ ಸಮಾವೇಶ. ಸಿಎಂ ಡಿಕೆಶಿ ಭಾಗಿ, 3,200 ಕೋಟಿ ಕಾಮಗಾರಿಗಳಿಗೆ ಚಾಲನೆ

ಮಾಲೂರು: ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ಸರ್ಕಾರದ 2 ವರ್ಷದ ಸಾಧನ ಸಮಾವೇಶ ಅದ್ಧೂರಿಯಾಗಿ ನಡೆಯಲಿದೆ. ಮಾಲೂರು ಶಾಸಕ ಕೆ. ವೈ. ನಂಜೇಗೌಡ ಅವರ ನೇತೃತ್ವದಲ್ಲಿ ವರವಲಯದ ಚೊಕ್ಕಂಡಹಳ್ಳಿಯಲ್ಲಿ ಈ ಬೃಹತ್ ಸಮಾವೇಶ ಆಯೋಜಿಸಲಾಗಿದೆ.

ಇಂದು ಬೆಳಗ್ಗೆ 11 ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಲೂರುಗೆ ಆಗಮಿಸಲಿದ್ದಾರೆ. ಡಿಸಿಎಂ ಡಾ. ಜಿ. ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ, ಸಚಿವರಾದ ಭೈರತಿ ಸುರೇಶ್, ಈಶ್ವರ್ ಖಂಡ್ರೆ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಶಾಸಕರು, ಮುಖಂಡರು ಮತ್ತು ಕಾರ್ಯಕರ್ತರು ಸಿಎಂಗೆ ಸಾಥ್ ನೀಡಲಿದ್ದಾರೆ.ಸಾಧನ ಸಮಾವೇಶದಲ್ಲಿ ಮುಖ್ಯಮಂತ್ರಿ ಡಿಕೆಶಿ ಅವರು ಮಾಲೂರು ಕ್ಷೇತ್ರದ ಸುಮಾರು 3,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ರಸ್ತೆ, ಕುಡಿಯುವ ನೀರು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಯೋಜನೆಗಳು ಇದರಲ್ಲಿ ಸೇರಿವೆ.

ಇಂದು ಬೃಹತ್ ಕಾಂಗ್ರೆಸ್ ಸಾಧನ ಸಮಾವೇಶ ಸಿಎಂ ಡಿಕೆಶಿ ಭಾಗಿ 3200 ಕೋಟಿ ಕಾಮಗಾರಿಗಳಿಗೆ ಚಾಲನೆ

ಈ ಕಾರ್ಯಕ್ರಮದಲ್ಲಿ ಸುಮಾರು 80 ಸಾವಿರದಿಂದ 1 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಜನರನ್ನು ಕರೆತರಲು ಪ್ರತಿ ಪಂಚಾಯಿತಿ ಮತ್ತು ಹೋಬಳಿಗೆ ಸರ್ಕಾರಿ ಹಾಗೂ ಖಾಸಗಿ ಬಸ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ.ಸಮಾವೇಶದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕನ್ನಿಕಾ ಸಿಕ್ರಿವಾಲ್ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಮಾಲೂರು ಕ್ಷೇತ್ರದಲ್ಲಿ ಕಳೆದ 2 ವರ್ಷಗಳಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಈ ಸಾಧನ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಶಾಸಕ ಕೆ. ವೈ. ನಂಜೇಗೌಡ ತಿಳಿಸಿದ್ದಾರೆ.ಸರ್ಕಾರದ ವಿವಿಧ ಇಲಾಖೆಗಳ ಸ್ಟಾಲ್‌ಗಳು, ಫೋಟೋ ಪ್ರದರ್ಶನಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ಸಮಾವೇಶದಲ್ಲಿ ನಡೆಯಲಿವೆ.

Share with Friends
author avatar
Digital Desk