LatestTop Storiesಬೆಂಗಳೂರು-Bengaluru

“ಮತ್ತೆ ಕಾವೇರಿ ನೀರು ಬಿಟ್ಟರೆ ಕರ್ನಾಟಕ ಬಂದ್” – ಸರ್ಕಾರಕ್ಕೆ ವಾಟಾಳ್ ನಾಗರಾಜ್ ಎಚ್ಚರಿಕೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟರೆ ಮತ್ತೆ ರಾಜ್ಯಾದ್ಯಂತ ಕರ್ನಾಟಕ ಬಂದ್ ಮಾಡುವುದಾಗಿ ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ಅವರು ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಖಂಡ ಕರ್ನಾಟಕ ಬಂದ್ ವೇಳೆ ಇಡೀ ರಾಜ್ಯಾದ್ಯಂತ ಸ್ವಯಂಪ್ರೇರಿತ ಪ್ರತಿಭಟನೆಗಳು ನಡೆದಿವೆ. ಬಂದ್‌ಗೆ ಬೆಂಬಲಿಸಿದ ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಸರ್ಕಾರಕ್ಕೆ ಕಟ್ಟುನಿಟ್ಟಿನ ಎಚ್ಚರಿಕೆ
ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಸುಪ್ರೀಂ ಕೋರ್ಟ್ ಅಥವಾ ಸಿಡಬ್ಲ್ಯೂಎ ಆದೇಶದ ಹೆಸರಿನಲ್ಲಿ ಸರ್ಕಾರ ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟರೆ ನಾವು ಸುಮ್ಮನಿರಲ್ಲ. ತಕ್ಷಣವೇ ಮತ್ತೊಂದು ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಕಾವೇರಿ ನಮ್ಮ ಹಕ್ಕು. ರೈತರ ಬದುಕಿನ ಪ್ರಶ್ನೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ರಾಜಿ ಮಾಡಿಕೊಂಡರೆ ನಾವು ರಸ್ತೆಗಿಳಿದು ಹೋರಾಟ ಮಾಡುತ್ತೇವೆ ಎಂದು ಅವರು ಹೇಳಿದರು.

ಬಂದ್ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಹಕರಿಸಿದ ಪೊಲೀಸ್ ಇಲಾಖೆ ಮತ್ತು ಜನರಿಗೂ ವಾಟಾಳ್ ಧನ್ಯವಾದ ಅರ್ಪಿಸಿದರು.

Share with Friends
author avatar
Digital Desk