Latestರಾಷ್ಟ್ರೀಯ-National

ಮದ್ಯನೀತಿ ಹಗರಣ ಪ್ರಕರಣ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಕೇಜ್ರೀವಾಲ್

ನವದೆಹಲಿ: ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಮಂಗಳವಾರ ಹೈಕೋರ್ಟ್ನಲ್ಲಿ ತಮ್ಮ ಅರ್ಜಿ ವಜಾ ಆದ ಹಿನ್ನಲೆ ಸುಪ್ರೀಂಕೋರ್ಟ್ ಆದೇಶವನ್ನು ಪ್ರಶ್ನಿಸಲಾಗಿದೆ.

ಅರ್ಜಿ ಸಲ್ಲಿಕೆ ಬೆನ್ನಲ್ಲೇ ದೆಹಲಿ ಹೈಕೋರ್ಟ್ ತೀರ್ಪಿನ ವಿರುದ್ಧ ಕೇಜ್ರಿವಾಲ್ ಅವರ ಮನವಿಯನ್ನು ತುರ್ತು ವಿಚಾರಣೆ ನಡೆಸಬೇಕು ಎಂದು ಕೋರಿ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠಕ್ಕೆ ಮನವಿ ಮಾಡಿದರು. ಬಂಧನವು ಅವಲಂಬಿತ ದಾಖಲೆಯನ್ನು ಆಧರಿಸಿದೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಮಾಹಿತಿಯನ್ನು ಇಮೇಲ್ ಕಳುಹಿಸಿ ಪರಿಶೀಲಿಸಲಾಗುವುದು ಎಂದು ಸೂಚಿಸಿದರು. ಇದನ್ನೂ ಓದಿ: ಹೆಂಡತಿಯ ಬರ್ಬರ ಹತ್ಯೆ, ಜಗಳ ಬಿಡಿಸಲು ಬಂದ ಅತ್ತೆಯೂ ಗಂಭೀರ

https://youtu.be/iMxTkg_jFTY?si=Sqa_sQ-frYhimUy3

ಹಗರಣದಲ್ಲಿ ಕೇಜ್ರಿವಾಲ್ ಶಾಮೀಲಾಗಿರುವುದನ್ನು ಸಾಬೀತುಪಡಿಸಲು ಪುರಾವೆಗಳಿವೆ ಎಂದು ಇಡಿ ಹೇಳಿದೆ. ಕಿಕ್‌ಬ್ಯಾಕ್ ಆಗಿ ಪಡೆದ ಹಣವನ್ನು 2022 ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಪ್ರಚಾರಕ್ಕಾಗಿ ಬಳಸಲಾಗಿದೆ ಎಂದು ಇದಕ್ಕೆ ಸಂಬಂಧಿಸಿದ ಲಿಂಕ್‌ಗಳು ಸಹ ಪತ್ತೆಯಾಗಿದೆ ಎಂದು ಇಡಿ ಹೇಳಿದೆ. ಹೀಗಾಗಿ ಬಂಧನ ಕಾನೂನು ಬಾಹಿರವಾಗಿಲ್ಲ ಎಂದು ಹೈಕರ‍್ಟ್ ತನ್ನ ಆದೇಶದಲ್ಲಿ ತಿಳಿಸಿತ್ತು. ಇದನ್ನೂ ಓದಿ: ಮದ್ಯ ಕುಡಿಯಬೇಡಿ ಎಂದಿದ್ದಕ್ಕೆ ಕೊಲೆ ಮಾಡಿದ ಯುವಕರು

Share with Friends
author avatar
News Desk