Crime NewsLatestರಾಜ್ಯ-Karnatakaರಾಷ್ಟ್ರೀಯ-National

ತಮಿಳುನಾಡಿನಲ್ಲಿ ಭೀಕರ ಅಪಘಾತ – ಘಟನೆಯಲ್ಲಿ ಮೂವರು ಪೊಲೀಸರು ಸಾವು

ಚೆನ್ನೈ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಐವರು ಪೊಲೀಸ್ ಅಧಿಕಾರಿಗಳು ಹೋಗುತ್ತಿದ್ದ ಜಿಪ್ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಹಾಗೂ ದಿಂಡಿವನಂ ಹೆದ್ದಾರಿಯಲ್ಲಿ ನಡೆದಿದೆ.

ಘಟನೆಯಲ್ಲಿ ಕರ್ನಾಟಕದ ಓರ್ವ ಅಧಿಕಾರಿ ಹಾಗೂ ಕಾನ್‌ಸ್ಟೇಬಲ್ ಸೇರಿ ಮೂವರು ಮೃತಪಟ್ಟಿದ್ದಾರೆ. ಉಳಿದ ಇಬ್ಬರ ಸ್ಥಿತಿ ಗಂಭೀರವಾಗಿದೆ. ಕರ್ನಾಟಕದಿಂದ ಎಲೆಕ್ಷನ್ ಡ್ಯೂಟಿಗೆ ಹೋಗಿದ್ದ ಪೊಲಿಶ್ ಅಧಿಕಾರಿ, ಕೆಸ್‌ಆರ್‌ಪಿ ಅಸಿಸ್ಟೆಂಟ್ ಕಮಾಂಡೆಂಟ್ ಪ್ರಭಾಕಲರ್, ಕಾನ್ಸ್ಟೇಬಲ್ ವಿಠಲ್ ಹಾಗೂ ತಮಿಳುನಾಡು ಕಾನ್ಸ್ಟೇಬಲ್ ದಿನೇಶ್ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಗೀತಾ ಶಿವರಾಜ್ ಕುಮಾರ್ ವಿರುದ್ಧ ದೂರು ನೀಡಿದ ಬಿಜೆಪಿ

https://youtu.be/j_YYSaW61_c?si=i2rD6iyi0SG8t9gg


ನಿನ್ನೆ ಸಂಜೆ 4 ಗಂಟೆ ಸುಮಾರಿಗೆ ತಿರುವಣ್ಣಾಮಲೈ- ದಿಂಡಿವನಂ ಹೈವೇಯಲ್ಲಿ ಅಪಘಾತ ಸಂಭವಿಸಿದ್ದು, ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಗೆ ತೆರಳುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. ಸದ್ಯ ಮೂವರ ಮೃತದೇಹಗಳನ್ನು ತಮಿಳುನಾಡಿನ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಮರಣೋತ್ತರ ಪರೀಕ್ಷೆ ಬಳಿಕ ಕರ್ನಾಟಕ ಪೊಲೀಸರಿಗೆ ಹಸ್ತಾಂತರ ಮಾಡಲಾಗುತ್ತದೆ. ಇದನ್ನೂ ಓದಿ: ಮೋದಿ ಫೋಟೋ ಬಳಕೆ ವಿಚಾರ- ಬಿಜೆಪಿಯಿಂದ ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

https://youtu.be/AJtxmiMwIq8?si=VCBd_d1KnGvhtdGv

ಇನ್ನು ಅಪಘಾತದ ರಭಸಕ್ಕೆ ಜೀಪ್‌ ಛಿದ್ರವಾಗಿದ್ದು, ಬಸ್‌ನ ಮುಂಭಾಗ ಸಹ ಜಖಂ ಆಗಿದೆ. ಸದ್ಯ ಗಂಭೀರವಾಗಿ ಗಾಯಗೊಂಡಿರುವ ಸಿಬ್ಬಂದಿ ಹೇಮಂತ್ ಕುಮಾರ್, ಜಯಕುಮಾರ್ ಅವರನ್ನು ತಿರುವಣ್ಣಾಮಲೈ ರ‍್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ತಾಯಿಗಾಗಿ ದೇವಸ್ಥಾನ ಕಟ್ಟಿಸಿದ ದಳಪತಿ ವಿಜಯ್

Share with Friends
author avatar
News Desk