Latestಚಾಮರಾಜನಗರ-Chamarajanagaraಚುನಾವಣೆ-Electionರಾಜ್ಯ-Karnataka

ಚಾಮರಾಜನಗರದಲ್ಲಿ ರೋಚಿಗೆದ್ದ ಗ್ರಾಮಸ್ಥರು – ಇವಿಎಂ ಧ್ವಂಸ

ಚಾಮರಾಜನಗರ: ಮತದಾನ (Vote) ಬಹಿಷ್ಕಿರಿಸಿದ್ದ ಗ್ರಾಮಸ್ಥರನ್ನು ಮನವೋಲಿಸಲು ತೆರಳಿದ್ದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಕಲ್ಲು ತೂರಾಟ ನಡೆಸಿ ಇವಿಎಂ (EVM) ಅನ್ನು ಸಹ ಧ್ವಂಸ ಮಾಡಿರುವ ಘಟನೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ.

ಮೂಲಭೂತ ಸೌಕರ್ಯ ಕೊರತೆಯಿಂದ ಮಹದೇಶ್ವರ ಬೆಟ್ಟ (Mahadeshwara HIlls) ವ್ಯಾಪ್ತಿಯ 5 ಗ್ರಾಮಗಳ ಗ್ರಾಮಸ್ಥರು ಮತದಾನದಿಂದ ದೂರ ಉಳಿದಿದ್ದರು. ಇಂಡಿಗನತ್ತ, ತೇಕಣೆ, ಮೆಂದಾರೆ ಹಾಗೂ ತುಳಸೀಕೆರೆ ಗ್ರಾಮಗಳಲ್ಲಿ ಮತದಾನ ಬಹಿಷ್ಕರಿಸಿದ್ದಾರೆ. ಇದನ್ನೂ ಓದಿ: ರಾಮನವಮಿ ಮೆರವಣಿಗೆ ದಿನ ಬಾಂಬ್ ಸ್ಫೋಟ NIA ತನಿಖೆಗೆ ಆದೇಶ

https://youtu.be/DbyxeBZAkXM?si=YD0Yqq5hwqAmpsUZ

ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ವಿದ್ಯುತ್ ಸೌಲಭ್ಯ ಇಲ್ಲ ಎಂದು ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದರು. ಈ ವೇಳೆ ಅಧಿಕಾರಿಗಳು ಕೆಲವರ ಮನವೊಲಿಸಿ ಮತದಾನಕ್ಕೆ ಕರೆತಂದಿದ್ದಾರೆ. ಈ ವೇಳೆ ಇಡೀ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದೇವೆ ಎಂದು ಗ್ರಾಮದ ಒಂದು ಗುಂಪು ಗಲಾಟೆ ಆರಂಭಿಸಿದೆ. ಎರಡು ಗುಂಪುಗಳ ಮಧ್ಯೆ ನಡೆದ ಜಗಳ ಕೊನೆಗೆ ವಿಕೋಪಕ್ಕೆ ತಿರುಗಿ ಇವಿಎಂ ಹಾಗೂ ಮತಗಟ್ಟೆಯ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಗಲಾಟೆಯಲ್ಲಿ ಕೆಲವು ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಒಂದೂವರೆ ಲಕ್ಷ ಖರ್ಚು ಮಾಡಿಕೊಂಡು ಬಂದು ಮತದಾನ ಮಾಡಿದ ಯುವತಿ

https://youtu.be/RFhW_rHRcB0?si=WjCHvHJ9I6jDVqCm

Share with Friends
author avatar
News Desk