Latest

ಪೊಲೀಸ್ ಅಧಿಕಾರಿಗಳು ಸೇರಿದಂತೆ 300-400 ಹೆಣ್ಣುಮಕ್ಕಳ ಮೇಲೆ ವಿಕೃತಿ ಮೆರೆದಿದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಮತ್ತು ಹಾಲಿ ಶಾಸಕ ಹೆಚ್‌ಡಿ ರೇವಣ್ಣ (HD.Revanna) ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 300-400 ಹೆಣ್ಣು ಮಕ್ಕಳ ಮೇಲೆ ವಿಕೃತಿಯನ್ನು ಮೆರೆದಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 16 ವರ್ಷದಿಂದ 50 ವರ್ಷದ ವರೆಗೆ ಮಹಿಳೆಯರಿದ್ದಾರೆ. ಇದರಲ್ಲಿ ಮನೆ ಕೆಲಸದವರು ಸೇರಿದಂತೆ ಪೊಲೀಸ್ ಅಧಿಕಾರಿಗಳು ಇದ್ದಾರೆ. ಹೆದರಿಸಿ ಬೆದರಿಸಿ ಈ ರೀತಿ ಮಾಡಿದ್ದಾರೋ ಗೊತ್ತಿಲ್ಲ. ಹೆಚ್‌ಡಿ ರೇವಣ್ಣ ಅವರು ಮುಖ್ಯ ಆರೋಪಿ, ಪ್ರಜ್ವಲ್ ರೇವಣ್ಣ ಎರಡನೇ ಆರೋಪಿ ಎಂದಿದ್ದಾರೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಹೆಚ್‌ಡಿಕೆ

https://youtu.be/tEV71sOEnV8?si=McWMF6BlGc-yT1KW

ನನಗೆ ವಿದೇಶದಿಂದ ಪೋನ್ ಕರೆಗಳು ಬರುತ್ತಿವೆ. ಇಷ್ಟೆಲ್ಲ ನಡೆಯುತ್ತಿದ್ದರೂ ಬಿಜೆಪಿ ನಾಯಕರು ಇದರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣ ಬಗ್ಗೆ ಎಲ್ಲ ಜಿಲ್ಲೆಗಳಲ್ಲಿ ಧರಣಿ ಮಾಡಿದರು. ಈಗ ಬಿಜೆಪಿ ನಾಯಕರಿಗೆ ಈ ಹೆಣ್ಣು ಮಕ್ಕಳು ಕಾಣಿಸುತ್ತಿಲ್ಲವಾ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ಶ್ರೀನಿವಾಸ ಪ್ರಸಾದ್ ಅವರ ಅಂತ್ಯಕ್ರಿಯೆ ಮಂಗಳವಾರ

https://youtu.be/hUI_GuBNXgY?si=MatSzN8m3GLSsY46

ಇವರ ಜಾಣ ಕುರುಡು ಪ್ರಕರಣ ಮುಚ್ಚಿ ಹಾಕಲು ಹೊರಟಿದೆ. ವಿಪಕ್ಷ ನಾಯಕ ಆರ್.ಅಶೋಕ್ ಜೆಡಿಎಸ್‌ನವರನ್ನ ಕೇಳಿ ಅಂತಾರೆ. ಈ ವಿಚಾರದಲ್ಲಿ ನಿಮ್ಮ ನಿಲುವೇನು? ರಾಜ್ಯದಲ್ಲಿ ನಡೆದ 2-3 ಘಟನೆ ಬಗ್ಗೆ ಮೋದಿ ಉಲ್ಲೇಖ ಮಾಡುತ್ತಾರೆ. ಪ್ರಧಾನಿ ಮೋದಿ ಈ ಪ್ರಕರಣದ ಬಗ್ಗೆ ಯಾಕೆ ಮಾತಾಡಲಿಲ್ಲ? ಪಕ್ಕದಲ್ಲೇ ಆ ಸಂಸದರನ್ನು ಕೂರಿಸಿಕೊಳ್ಳತ್ತೀರಿ. ಬೇಟಿ ಬಚಾಚೋ, ಬೇಟಿ ಪಡಾವೋ ಬರೀ ಘೋಷಣೆ ಅಷ್ಟೇನಾ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಮದುವೆಗೊಪ್ಪದಕ್ಕೆ ಅತ್ಯಾಚಾರವೆಸಗಿ ಕಬ್ಬಿಣದಿಂದ ಮುಖದ ಮೇಲೆ ಹೆಸರು ಬರೆದು ಕೃತ್ಯ ಎಸಗಿದ ಪಾಗಲ್ ಪ್ರೇಮಿ

https://youtu.be/BNwwXuWwJxU?si=H8o29lSiVN7Ejl7Z

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿ ಬಿಡಬೇಡಿ. ಇದು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತೆ ಹೆಣ್ಣುಮಕ್ಕಳಿಗೆ ಅಪಮಾನ ಆಗುತ್ತೆ. ಜಗದೀಶ್ ಶೆಟ್ಟರ್ ಅವರು ಈ ಹೆಣ್ಣುಮಕ್ಕಳ ಬಗ್ಗೆ ಯಾಕೆ ಮಾತಾಡುತ್ತಿಲ್ಲ. ಯಾಕೆ ಮೌನ ವಹಿಸಿದ್ದಾರೆ? ಪ್ರಜ್ವಲ್ ರೇವಣ್ಣ ಕರ್ಮಕಾಂಡ ಕಾಣಿಸುತ್ತಿಲ್ವ. ನನ್ನ ಬಗ್ಗೆ ಹಗುರವಾಗಿ ಮಾತಾಡಿದಾಗ ಶೆಟ್ಟರ್ ಮತ್ತು ಮಂಗಲಾ ಅಂಗಡಿ ನಕ್ಕರು. ಇವತ್ತು ಸಂಜಯ್ ಪಾಟೀಲ್ ಅವರಿಗೆ ಹೆಣ್ಣುಮಕ್ಕಳ ಬಗ್ಗೆ ಮಾತಾಡುವ ಪೌರುಷ ಬರ್ತಿಲ್ಲ ಯಾಕೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ಮೋದಿಗಾಗಿ ರಕ್ತದಿಂದ ಬಿಡಿಸಿದ ಭಾವಚಿತ್ರ: ಬಾಗಲಕೋಟೆ ಯುವಕನಿಂದ ಉಡುಗರೆ

https://youtu.be/RFhW_rHRcB0?si=cv2noNx5KgpgIWB_

Share with Friends
author avatar
News Desk