Crime NewsLatestಕಲಬುರಗಿ-Kalaburagiರಾಜ್ಯ-Karnataka

ಜಾತಿ ನಿಂದನೆ ಕೇಸ್‌ಗೆ ಹೆದರಿ 23 ವರ್ಷದ ಯುವಕ ಆತ್ಮಹತ್ಯೆ ಶರಣು

ಕಲಬುರಗಿ: ಜಾತಿ ನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಮಲಾಪುರ (Kamalapura) ತಾಲ್ಲೂಕಿನ ಲಾಡಮುಗಳಿ ಗ್ರಾಮದಲ್ಲಿ (Village) ಬೆಳಕಿಗೆ ಬಂದಿದೆ

ನಿಖಿಲ್ ಪೂಜಾರಿ (23) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ. ನಿಖಿಲ್ ಲಾಡಮುಗಳಿ ಗ್ರಾಮದ ಹೊರ ವಲಯದ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾನೆ. ನಾಲ್ಕು ದಿನದ ಹಿಂದೆ ಲಾಡಮುಗುಳಿ ಗ್ರಾಮದಲ್ಲಿ ಜಾತ್ರೆ ವೇಳೆ ಗಲಾಟೆ ನಡೆದಿತ್ತು. ಎರಡು ಸಮುದಾಯದ ಯುವಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿತ್ತು. ಗಲಾಟೆಯ ಬಳಿಕ ಊರವರ ಸಮ್ಮುಖದಲ್ಲಿ ರಾಜಿ ಸಂಧಾನ ಕೂಡ ನಡೆದಿತ್ತು. ಇದನ್ನೂ ಓದಿ: ಕರೆಂಟ್ ಕಂಬಕ್ಕೆ ಕ್ರೂಸರ್ ವಾಹನ ಭಯಾನಕ ಡಿಕ್ಕಿ.. 3 ಸಾವು, ಇಬ್ಬರು ಗಂಭೀರ, ಡಿಕ್ಕಿಯಾಗಲು ಕಾರಣವೇನು?

https://youtu.be/VdisxEZw61M?si=HzDp7X7_TWpK34pO

ಬಳಿಕ ಇನ್ನೊಂದು ಸಮುದಾಯ ಯುವಕರು ನಿಖಿಲ್ ಪೂಜಾರಿ ಸೇರಿ ಹಲವರ ವಿರುದ್ದ ದೂರು ನೀಡಿದ್ದರು. ನರೋಣಾ ಪೊಲೀಸ್ ಠಾಣೆಯಲ್ಲಿ ನಿಖಿಲ್ ಸೇರಿ ಹಲವರ ವಿರುದ್ದ ಜಾತಿ ನಿಂದನೆ ಕೇಸ್ ದಾಖಲಾಗಿತ್ತು. ಇದರಿಂದ ಹೆದರಿ ನಿಖಿಲ್ ಪೂಜಾರಿ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ಪ್ರಧಾನಿಯಾಗಲು ಪಾಕ್ ಪ್ರಾರ್ಥನೆ: ಮೋದಿ

https://youtu.be/7ZX33HT5nQs?si=R9C2YvMcmcjZ5OB8
Share with Friends
author avatar
News Desk