Crime NewsLatestಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಪೆನ್‌ಡ್ರೈವ್‌ ಪ್ರಜ್ವಲ್ ಪ್ರಕರಣ: ಮೇ 10 ರೊಳಗೆ ವಿಚರಣೆಗೆ ಹಾಜರಾಗಲು ಪ್ರಜ್ವಲ್ ನಿರ್ಧಾರ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಸದ್ಯ ವಿದೇಶದಲ್ಲಿದ್ದುಕೊಂಡೇ ವಕೀಲರ ಸಲಹೆ ಪಡೆಯುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಮೇ 10ರೊಳಗೆ ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಪ್ರಕರಣ ಬೆಳಕಿಗೆ ಬಂದ ಸಂದರ್ಭದಲ್ಲೇ ವಿದೇಶಕ್ಕೆ ತೆರಳಿರುವ ಪ್ರಜ್ವಲ್, ಏಪ್ರಿಲ್ 27ರಿಂದ ಇಲ್ಲಿವರೆಗೂ ವಿದೇಶದಲ್ಲಿದ್ದುಕೊಂಡೇ ಕಾನೂನು ತಜ್ಞರ ಜೊತೆ ನಿರಂತರ ಸಂಪರ್ಕ ಹೊಂದಿದ್ದಾರೆ. ದೆಹಲಿ (Delhi) , ಬೆಂಗಳೂರಿನ (Bengaluru) ನುರಿತ ವಕೀಲರ ಜೊತೆ ಸಂಪರ್ಕ ಇಟ್ಟುಕೊಂಡಿದ್ದಾರೆ. ಈ ಮಧ್ಯೆ, ವಕೀಲರ ಸಲಹೆಯಂತೆ ಮೇ 10ರೊಳಗೆ ದೇಶಕ್ಕೆ ಬಂದು ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಭೀಕರ ಮಳೆಗೆ ತತ್ತರಿಸಿದ ಬ್ರೆಜಿಲ್ ದಕ್ಷಿಣ ಪ್ರದೇಶ – 37 ಮಂದಿ ಸಾವು

https://youtu.be/Brl4wWq34t0?si=lsdzYx7U_qTlJjPh

ಮಹಿಳೆಯ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಅರ್ಜಿ ಸಲ್ಲಿಸಿರುವ ಮಾಜಿ ಸಚಿವ ಹೆಚ್‌ಡಿ ರೇವಣ್ಣಗೆ (HD.Revanna) ಇಂದು ಅಗ್ನಿ ಪರೀಕ್ಷೆ ಎದುರಾಗಲಿದೆ. ಈ ಸಂಬಂಧ ಜನಪ್ರತಿನಿದಿಗಳ ವಿಶೇಷ ಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನಿಗೆ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲೂ ನಿರೀಕ್ಷಣಾ ಜಾಮೀನಿಗೆ ಅವರು ಅರ್ಜಿ ಸಲ್ಲಿಸಿದ್ದರು. ಆದರೆ, ಆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆಯುವುದಕ್ಕೆ ಸಂಬಂಧಿಸಿದಂಥ ಗಂಭೀರ ಆರೋಪ ಯಾವುದೂ ಇಲ್ಲದ ಕಾರಣ ಅರ್ಜಿ ವಾಪಸ್ ಪಡೆದಿದ್ದರು. ಇದನ್ನೂ ಓದಿ: ಅಪ್ರಾಪ್ತೆಯನ್ನ ಗರ್ಭಿಣಿ ಮಾಡಿದ ಅನ್ಯಕೋಮಿನ ಯುವಕ: ಆರೋಪಿ ಕಾಲಿಗೆ ಗುಂಡೇಟು

https://youtu.be/nsYxznc2q9Q?si=nfUqL9U7LrOrcKuF

ಇದರ ನಡುವೆ ರೇವಣ್ಣ ವಿರುದ್ಧ ಮೈಸೂರಿನ (Mysuru) ಕೆಆರ್ ನಗರ ಠಾಣೆಯಲ್ಲಿ ಮಹಿಳೆಯ ಕಿಡ್ನಾಪ್ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಎರಡನೇ ಆರೋಪಿಯನ್ನು ಈಗಾಗಲೇ ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ವಹಿಸಿದ್ದಾರೆ. ರೇವಣ್ಣ ಕರೆತರಲು ಹೇಳಿದ್ದಾರೆಂದು ಸಂತ್ರಸ್ತ ಮಹಿಳೆಯನ್ನು ಎರಡನೇ ಆರೋಪಿ ಸತೀಶ್ ಬಾಬು ಕರೆದೊಯ್ದಿದ್ದ ಎಂದು ಮಹಿಳೆಯ ಪುತ್ರ ದೂರಿನಲ್ಲಿ ತಿಳಿಸಿದ್ದರು. ಇದನ್ನೂ ಓದಿ: ರಾಯ್‌ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

https://youtu.be/ZrH9DHzVksQ?si=SiB-xgO2Vpru3PGT

ಅಜ್ಞಾತ ಸ್ಥಳದಲ್ಲಿ ರೇವಣ್ಣ
ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆದರೆ ರೇವಣ್ಣಗೂ ಬಂಧನ ಭೀತಿ ಎದುರಾಗಲಿದೆ. ಹೀಗಾಗಿ ಸದ್ಯ ಬೆಂಗಳೂರಿನ ಅಜ್ಞಾತ ಸ್ಥಳದಲ್ಲಿದ್ದು ರೇವಣ್ಣ ವಕೀಲರ ಮೂಲಕ ಮಾಹಿತಿ ಪಡೆಯುತ್ತಿದ್ದಾರೆ. ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪು ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ. ಇದನ್ನೂ ಓದಿ: ರಾಜ್ಯಪಾಲರ ಮೇಲೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ

https://youtu.be/EZRTqz4UhHw?si=YKMoEsbnKusX-hug

ಈ ಮಧ್ಯೆ, ಇಂದು ಸಂಜೆಯೊಳಗೆ ವಿಚಾರಣೆಗೆ ಹಾಜರಾಗಲು ರೇವಣ್ಣಗೆ SITಎರಡನೇ ನೋಟಿಸ್ ನೀಡಿದೆ. ಇಂದು ನಿರೀಕ್ಷಣಾ ಜಾಮೀನು ಸಿಕ್ಕಿದರೆ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಇಂದು ನಿರೀಕ್ಷಣ ಜಾಮೀನು ಸಿಕ್ಕರೆ ವಿಚಾರಣೆಗೆ ಹಾಜರು ಸಾಧ್ಯತೆ ಇದೆ. ಇದನ್ನೂ ಓದಿ: ಕಂದಕಕ್ಕೆ ಉರುಳಿದ್ದ ಬಸ್ -20 ಮಂದಿ ಸಾವು

Share with Friends
author avatar
News Desk