Crime NewsLatestಬೆಂಗಳೂರು-Bengaluruರಾಜ್ಯ-Karnataka

ಕೆಎಎಸ್ ಅಧಿಕಾರಿಯ ಪತ್ನಿ, ಹೈಕೋರ್ಟ್ ವಕೀಲೆ ಆತ್ಮಹತ್ಯೆಗೆ ಶರಣು

ಬೆಂಗಳೂರು: ಕೆಎಎಸ್ (KAS) ಅಧಿಕಾರಿ ಪತ್ನಿಯೂ ಆಗಿರುವ ಹೈಕೋರ್ಟ್ (HigCourt) ವಕೀಲರಾದ (Lawyer) ಚೈತ್ರಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಪತಿ ಶಿವಕುಮಾರ್ ಕೆಎಎಸ್ ಅಧಿಕಾರಿಯಾಗಿದ್ದು, ಚೈತ್ರಾ ಹೈಕೋರ್ಟ್ ವಕೀಲೆಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಇದನ್ನೂ ಓದಿ:ಹೆಣ್ಣು ಮಗುವೆಂದು ಮಾತ್ರೆ ಸೇವಿಸಿ ಗರ್ಭಪಾತ

ಈ ಸಂಬಂಧ ಮೃತ ಚೈತ್ರಾ ಸಹೋದರ ಕೊಟ್ಟ ದೂರಿನ ಆಧಾರದ ಮೇಲೆ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ:ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಬಂಧನ

https://youtu.be/Huo-fB975OQ?si=ifeSq9kRALGfrDjx
Share with Friends
author avatar
News Desk