LatestWeatherಮಂಡ್ಯ-Mandyaರಾಜ್ಯ-Karnataka

ಮಳೆಯಿಂದಾಗಿ ಕೆಆರ್‌ಎಸ್ ಡ್ಯಾಂನ ಒಳಹರಿವಿನಲ್ಲಿ ಹೆಚ್ಚಳ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣದ (Srirangapatna) ತಾಲೂಕಿನ ಕೆಆರ್‌ಎಸ್ ಡ್ಯಾಂಗೆ (KRS Dam) ಒಳಹರಿವು ಹೆಚ್ಚಳವಾಗಿದೆ.

ರಾಜ್ಯದಲ್ಲಿ ಉತ್ತಮವಾಗಿ ಮಳೆ ಆಗುತ್ತಿರುವ ಕಾರಣ ಇಂದು 3,365 ಕ್ಯೂಸೆಕ್ ನೀರು ಡ್ಯಾಂಗೆ ಹರಿದು ಬರುತ್ತಿದೆ. ಕೆಆರ್‌ಎಸ್ ಡ್ಯಾಂಗೆ ನಿನ್ನೆ 2,509 ಕ್ಯೂಸೆಕ್ ಒಳಹರಿವು ಇತ್ತು. 24 ಗಂಟೆಗಳಲ್ಲಿ ಸದ್ಯ 856 ಕ್ಯೂಸೆಕ್ ನೀರು ಹೆಚ್ಚಳವಾಗಿದೆ. ಇಷ್ಟು ದಿನಗಳ ಕಾಲ ಬೇಸಿಗೆಯ ದಿನಗಳಲ್ಲಿ ರೈತರು ಹಾಗೂ ಜನರಲ್ಲಿ ಆತಂಕ ಸೃಷ್ಟಿಯಾಗಿತ್ತು. ಇದೀಗ ಉತ್ತಮವಾಗಿ ಮಳೆಯಾಗುತ್ತಿದ್ದು, ಕೆಆರ್‌ಎಸ್ ಡ್ಯಾಂಗೆ ಒಳಹರಿವು ಹೆಚ್ಚಳ ಆಗುತ್ತಿರೋದು ರೈತರು ಹಾಗೂ ಜನರಲ್ಲಿ ಸಂತಸ ತಂದಿದೆ. ಇದನ್ನೂ ಓದಿ: ಇಂದು ಭಾರೀ ಮಳೆ ಸಾಧ್ಯತೆ- ಕೇರಳದಲ್ಲಿ 11 ಮಂದಿ ಸಾವು

https://youtu.be/8HO4VosUuaI?si=95otuDSQA5KP38y1

ಇನ್ನೂ 124.80 ಅಡಿಗಳ ಗರಿಷ್ಠ ಮಟ್ಟದ ಕೆಆರ್‌ಎಸ್ ಡ್ಯಾಂನಲ್ಲಿ ಈಗ 82.30 ಅಡಿ ನೀರು ಇದ್ದು, 49.452 ಟಿಎಂಸಿ ಗರಿಷ್ಠ ಸಾಂದ್ರತೆಯ ಡ್ಯಾಂನಲ್ಲಿ 11.837 ಟಿಎಂಸಿ ನೀರು ಶೇಖರಣೆಯಾಗಿದೆ. ಇನ್ನೂ ಕೆಆರ್‌ಎಸ್ ಡ್ಯಾಂಗೆ 3,365 ಕ್ಯೂಸೆಕ್ ಒಳಹರಿವು ಇದ್ದು, 528 ಕ್ಯೂಸೆಕ್ ಹೊರಹರಿವು ಇದೆ. ಇದನ್ನೂ ಓದಿ: ಬಾತ್​​ ರೂಮ್​ನ​ಲ್ಲಿ ಯುವತಿ ಶವ ಪತ್ತೆ ಪ್ರಕರಣ: ಕೈ ಕೋಯ್ದು ಕೊಲೆಗೈದ ಅಪ್ರಾಪ್ತ ಬಾಲಕ

Share with Friends
author avatar
News Desk