Latestಚುನಾವಣೆ-Electionಮಂಡ್ಯ-Mandyaರಾಜಕೀಯ | Politicsರಾಜ್ಯ-Karnataka

ಸಕ್ಕರೆನಾಡು ಮಂಡ್ಯದಲ್ಲಿ ಗೆದ್ದು ಬೀಗಿದ ಹೆಚ್‌.ಡಿ ಕುಮಾರಸ್ವಾಮಿ

ಮಂಡ್ಯ: ಲೋಕಸಭಾ ಚುನಾವಣೆಯ ಮಂಡ್ಯ ಕ್ಷೇತ್ರ ಫಲಿತಾಂಶದಲ್ಲಿ ಬಿಜೆಪಿ-ಜೆಡಿಎಸ್‌ (BJP- JDS) ಮೈತ್ರಿ ಅಭ್ಯರ್ಥಿ ಹೆಚ್‌.ಡಿ ಕುಮಾರಸ್ವಾಮಿ ಬಹುತೇಕ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ.

ಹೆಚ್‌ಡಿಕೆ 2,71,344 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ, ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು (Star Chandru) ವಿರುದ್ಧ ಹೆಚ್‌ಡಿಕೆ ಸ್ಪರ್ಧೆ ಮಾಡಿದ್ದರು. ಮತಎಣಿಕೆ ಆರಂಭವಾದಿಗಿನಿಂದಲೂ ಕುಮಾರಸ್ವಾಮಿ ಮುನ್ನಡೆ ಕಾಯ್ದುಕೊಂಡು ಬಂದಿದ್ದು, ಹೆಚ್‌ಡಿಕೆ ಗೆಲುವು ಬಹುತೇಕ ಖಚಿತವಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌ ಭದ್ರಕೋಟೆ ಅಮೇಥಿಯಲ್ಲಿ ಸ್ಮೃತಿ ಇರಾನಿಗೆ ಹಿನ್ನೆಡೆ

https://youtu.be/bkuh9l3KgRk?si=Iadh1BJFI_8E3CQc

ಒಕ್ಕಲಿಗ ಸಮುದಾಯದ ಪ್ರಾಬಲ್ಯವಿರುವ ಮಂಡ್ಯ ಕ್ಷೇತ್ರದಲ್ಲಿ ಒಕ್ಕಲಿಗರಿಬ್ಬರ ಮಧ್ಯೆಯೇ ಭಾರೀ ಪೈಪೋಟಿ ಏರ್ಪಟ್ಟಿತ್ತು. ಎನ್‌ಡಿಎ ಅಭ್ಯರ್ಥಿ, ಜೆಡಿಎಸ್‌ನ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹಾಗೂ ಕಾಂಗ್ರೆಸ್‌ನ ವೆಂಕಟರಮಣೇಗೌಡ ಅಲಿಯಾಸ್‌ ಸ್ಟಾರ್‌ ಚಂದ್ರು ನಡುವೆ ಇಲ್ಲಿ ಫೈಟ್‌ ಇತ್ತು. ಇದೀಗ ಸ್ಟಾರ್ ಚಂದ್ರು ವಿರುದ್ಧ ಹೆಚ್‌ಡಿಕೆ ಗೆಲುವು ಸಾಧಿಸಿದರೂ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಆಗಬೇಕಷ್ಟೇ. ಇದನ್ನೂ ಓದಿ: ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆಗೆ ಒತ್ತಾಯ

https://youtu.be/D7pe8Pemslc?si=IyTE1fZ0XZlEMy1D

ವಿಜಯೋತ್ಸವಕ್ಕೆ ಬ್ರೇಕ್: ವಿಜಯೋತ್ಸವ, ಸಂಭ್ರಮಾಚರಣೆ, ಪಟಾಕಿ ಸಿಡಿಸುವುದಕ್ಕೆ ಸಂಪೂರ್ಣ ಬ್ರೇಕ್ ಹಾಕಿರುವ ಮಂಡ್ಯ ಜಿಲ್ಲಾಡಳಿತ ಜೂನ್ 4 ರ ಬೆಳಗ್ಗೆ 6 ಗಂಟೆಯಿಂದ ಜೂನ್ 5ರ ಬೆಳಗ್ಗೆ 6 ರವರೆಗೆ ಜಿಲ್ಲಾದ್ಯಂತ 144 ಸೆಕ್ಷನ್ ಜಾರಿ ಮಾಡಿದೆ. ಅಲ್ಲದೇ ಮಂಡ್ಯ ನಗರ ವ್ಯಾಪ್ತಿಯಲ್ಲಿ ಜೂನ್ 3ರ ಸಂಜೆ 6 ಗಂಟೆಯಿಂದ 5 ರ ಬೆಳಿಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಇದನ್ನೂ ಓದಿ: Election Results: ಲೀಡ್ ಬರುತ್ತಿದ್ದಂತೆ ನಾಮಫಲಕಕ್ಕೆ ಯದುವೀರ್ ಪೂಜೆ

https://youtu.be/bkuh9l3KgRk?si=mdtFfBsO7Go9Tc5Y
Share with Friends
author avatar
News Desk