Latestಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಚುನಾವನೆಯ ಸೋಲುಂಡ ಕಾಂಗ್ರೆಸ್ ಬಿಸ್‌ವೈ ವಿರುದ್ಧ ರಾಜಕೀಯ ವೈಶಮ್ಯ ಸಾಗಿಸುತ್ತಿದ್ದಾರೆ : ಜೋಶಿ ಕಿಡಿ

ಬೆಂಗಳೂರು: ಪೊಕ್ಸೋ (POCSO) ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ (BS Yediyurappa) ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್​​ ಜಾರಿಯಾಗಿದ್ದನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಖಂಡಿಸಿದ್ದಾರೆ. ರಾಜ್ಯ ಕಾಂಗ್ರೆಸ್​ ಸರ್ಕಾರ ಆಡಳಿತವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಇದು ರಾಜಕೀಯ ವೈಶಮ್ಯ ಎಂದು ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿದ ಪ್ರಲ್ಹಾದ್ ಜೋಶಿ”ಲೋಕಸಭೆ ಚುನಾವಣೆ 2024ರಲ್ಲಿ ಸೋಲುಂಡ ಕಾಂಗ್ರೆಸ್ ಅದನ್ನು ಜೀರ್ಣಿಸಿಕೊಳ್ಳಲಾಗದೆ ಆಡಳಿತವನ್ನು ದುರುಪಯೋಗ ಮಾಡಿ ಮನಬಂದಂತೆ ಷಡ್ಯಂತ್ರ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ “ಆಕೆ ಮಾನಸಿಕವಾಗಿ ಅಸ್ವಸ್ಥಳು, ದುರುದ್ದೇಶದಿಂದ ದೂರು ನೀಡಿದ್ದಾಳೆ. ಇದನ್ನೂ ಓದಿ: ಭೂಗತ ಪಾತಕಿ ರವಿ ಪೂಜಾರಿಗೆ ಶಸ್ತ್ರಚಿಕಿತ್ಸೆ- ಆಸ್ಪತ್ರೆಗೆ ದಾಖಲು

ಆಕೆ ಈಗಾಗಲೇ ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ರಾಜಕಾರಣಿಗಳ ಮೇಲೆ 60ಕ್ಕೂ ಹೆಚ್ಚು ಕೇಸ್ ಗಳನ್ನು ದಾಖಲಿಸಿದ್ದಾಳೆ’ ಎಂದು ಅವರ ಗೃಹ ಮಂತ್ರಿಗಳೇ ಖುದ್ದಾಗಿ ಈ ಹಿಂದೆ ಹೇಳಿದ್ದರು. ಈಗ ನಿಮ್ಮ ದುರಾಡಳಿತವನ್ನು ಮರೆಮಾಚಲಿಕ್ಕೆ 81 ವರ್ಷದ ಬಿಜೆಪಿ ವರಿಷ್ಠರಾದ ಬಿಎಸ್​ ಯಡಿಯೂರಪ್ಪ ಅವರ ಮೇಲೆ ಈ ಇಲ್ಲಸಲ್ಲದ ಪ್ರಕರಣ ಎಳೆಯುತ್ತಿರುವುದು ರಾಜಕೀಯ ವೈಶಮ್ಯವಷ್ಟೇ. ನಿಮ್ಮ ಈ ದುರ್ಬುದ್ಧಿಗೆ ನೀವು ತಕ್ಕ ಪಾಠ ಕಲಿಯಲಿದ್ದೀರಿ” ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನೂ ಈ ಕೇಸ್‌ ದಾಖಲಿಸಿದ ಮಹಿಳೆ ಕಳೆದ ತಿಂಗಳು ತೀರಿಕೊಂಡಿದ್ದಾರೆ. ಕೇಸ್​ ಕೊಟ್ಟ ಮಹಿಳೆಯ ಮಗನ ದೂರು ಪಡೆದು ತಕ್ಷಣಕ್ಕೆ ಕೋರ್ಟಿಗೆ ಹೋದ ಪೊಲೀಸರು ಹೀಗೆ ಮಾಡಿದ್ದಾರೆ. ಇದನ್ನೂ ಓದಿ: ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಕಣಕ್ಕೆ ಇಳಿಯುವ ಸಾಧ್ಯತೆ

https://youtu.be/IoCu5rYZvOE?si=fDWUwHORuaFjg9HE

ಸದ್ಯ ಯಡಿಯೂರಪ್ಪನವರು ದೆಹಲಿಯಲ್ಲಿ ಇದ್ದಾರೆ, ಹೀಗಾಗಿ ಅವರು ಎರಡು ದಿನಗಳಲ್ಲಿ ಬರುವುದಾಗಿ ಹೇಳಿದ್ದರೂ ಅರ್ಜೆನ್ಸಿ ಮಾಡಿದ್ದಾರೆ. ಕಳೆದ 4 ತಿಂಗಳಿನಿಂದ ಕಾಂಗ್ರೆಸ್‌ಗೆ ಯಾವುದೇ ಅರ್ಜೆನ್ಸಿ ಇರಲಿಲ್ಲ. ಈಗ ಒಂದೇ ದಿನ ಅರ್ಜೆನ್ಸಿ ಬಂದಿದೆ. ಇವತ್ತು ಜಾಮೀನುರಹಿತ ವಾರಂಟ್ ಪಡೆದು ಅರೆಸ್ಟ್ ಮಾಡಲು ಹೋಗಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ಖಂಡನಾರ್ಹ ವಿಚಾರ. ಕಾಂಗ್ರೆಸ್ ಪಕ್ಷ ಹಗೆತನದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಟೀಕಿಸಿದ್ದಾರೆ.ಇದನ್ನೂ ಓದಿ: ಭೂಗತ ಪಾತಕಿ ರವಿ ಪೂಜಾರಿಗೆ ಶಸ್ತ್ರಚಿಕಿತ್ಸೆ- ಆಸ್ಪತ್ರೆಗೆ ದಾಖಲು

ಘಟನೆ ವಿವರ
ಬಿಎಸ್‌ ಯಡಿಯೂರಪ್ಪ ಅವರು ತಮ್ಮ ಅಪ್ರಾಪ್ತ ಪುತ್ರಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರು ಮಾರ್ಚ್ ತಿಂಗಳಲ್ಲಿ ದೂರು ನೀಡಿದ್ದರು. ಆದರೆ ಅವರು ಕಳೆದ ತಿಂಗಳು ಅನ್ಯಾರೋಗ್ಯದಿಂದ ದೂರುದಾರೆ ಮೃತಪಟ್ಟಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪಗೆ ಪೊಲೀಸರು ನೋಟಿಸ್ ನೀಡಿದ್ದರು. ಯಡಿಯೂರಪ್ಪ ಅವರು ಸೋಮವಾರ ಜೂನ್ 17 ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

https://youtu.be/scaejbJlrAQ?si=exJEu4lSZ_Cp7s-E

ಇನ್ನು ಬಿ.ಎಸ್.ಯಡಿಯೂರಪ್ಪ ಬಂಧಿಸುವಂತೆ ನಿರ್ದೇಶನ ಕೋರಿ ಪೋಕ್ಸೋ ಕೇಸ್ ಸಂತ್ರಸ್ತೆಯ ಸಹೋದರ ಜೂ.12 ರಂದು ಹೈಕೋರ್ಟ್‌ಗೆ ರಿಟ್​ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ರಹಿತ ವಾರೆಂಟ್​ ಜಾರಿಮಾಡಿದೆ. ಬಿಎಸ್ ಯಡಿಯೂರಪ್ಪ ಅವರು ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣಕ್ಕೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕುವೈತ್‌ ಅಗ್ನಿ ದುರಂತ: 45 ಭಾರತೀಯರ ಶವಗಳೊಂದಿಗೆ ಕೇರಳಕ್ಕೆ ಬಂದಿಳಿದ ಸೇನಾ ವಿಮಾನ

Share with Friends
author avatar
News Desk