Crime NewsLatestಕೊಪ್ಪಳ-Koppalaರಾಜ್ಯ-Karnataka

ಕೊಡಗು: ಉದ್ಯಮಿ ಮನೆ ಮೇಲೆ ಗುಂಡಿನ ದಾಳಿ -ಮಾಲೀಕನಿಗೆ ಗಂಭೀರ ಗಾಯ

ಮಡಿಕೇರಿ: ಕೊಡಗು ಜಿಲ್ಲೆ ಕುಶಾಲನಗರ (Kushalanagar) ಪಟ್ಟಣದಲ್ಲಿ ಸೋಮವಾರ ಉದ್ಯಮಿ ಶಶಿಧರ್​ ಎಂಬುವರ ಮೇಲೆ 8 ಸುತ್ತು ಗುಂಡಿ ದಾಳಿ ನಡೆಸಲಾಗಿದ್ದು, ಘಟನೆಯಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇತ್ತಿಚೆಗೆಗಷ್ಟೇ ಹಾಸನದಲ್ಲಿ ಗುಂಡಿನ ದಾಳಿ ನಡೆದಿತ್ತು. ಆ ಕಹಿ ನೆನಪು ಮಾಸುವ ಮುನ್ನವೇ ಇದೀಗ ಮತ್ತೊಂದು ಘಟನೆ ನಡೆದಿದೆ. ಕೊಟಗು ಜಿಲ್ಲೆಯಲ್ಲಿ ಗುಂಡಿನ ಮೊರೆತ ಕೇಳಿದೆ. ಅನುದೀಪ್ ಎಂಬಾತ ದಾಳಿ ನಡೆಸಿದ್ದು, ಘಟನೆಯಲ್ಲಿ ಉದ್ಯಮಿ ಶಶಿಧರ್ ಅವರ ಕಾಲಿಗೆ ಗಂಭೀರ ಗಾಯವಾಗಿದೆ. ಇದನ್ನೂ ಓದಿ: ಕಂದಾಯ ಸಚಿವ ಇದ್ದಾಗಲೇ  ಕಲಬುರುಗಿ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ

https://youtu.be/OvXrOZlPR8I?si=l88I3Hy6KvmhTHMt

ಕ್ಷುಲ್ಲಕ‌ ಕಾರಣಕ್ಕೆ ಅನುದೀಪ್ ಪಿಸ್ತೂಲ್​ನಿಂದ ಉದ್ಯಮಿಯ ಮೇಲೆ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ. ಶಶಿಧರ್​ ತಮ್ಮ ಫಾರ್ಚೂನರ್ ಕಾರಿನಲ್ಲಿದ್ದಾಗ ಆರೋಪಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. 8 ಗುಂಡುಗಳು ಕಾರನ್ನು ಹೊಕ್ಕಿದ್ದು, ಶಶಿಧರ್ ಅವರ ಕಾಲಿಗೂ ಗುಂಡು ಹೊಕ್ಕಿದೆ. ಇದನ್ನೂ ಓದಿ: ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಪ್ರಮಾಣ ವಚನ ಸ್ವೀಕಾರ – ನೂತನ ಸಂಸದರಿಗೆ ಸ್ವಾಗತ ಕೋರಿದ ಮೋದಿ

ಹಾಸನದ ಹೊಯ್ಸಳ‌ ನಗರ ಬಡಾವಣೆಯಲ್ಲಿ ಜೂನ್ 20ರಂದು ಗುಂಡಿನ ದಾಳಿ ನಡೆದಿತ್ತು. ಓರ್ವ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಮತ್ತೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ಇದೆ ಎಂದು ಹಾಸನ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಮಾಹಿತಿ ನೀಡಿದ್ದರು.

https://youtu.be/nOpHnJtxLm4?si=z6QXy2ohjGpqEIHU

ಸದ್ಯ ಆರೋಪಿಯನ್ನು ಕುಶಾಲನಗರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ 17ರ ಯುವಕನ ಬರ್ಬರ ಹತ್ಯೆ!

Share with Friends
author avatar
News Desk