EntertainmentLatestಬೆಂಗಳೂರು-Bengaluruರಾಜ್ಯ-Karnatakaಸ್ಯಾಂಡಲ್​ವುಡ್-Sandalwood

ದರ್ಶನ್‌ ಪ್ರಕರಣ: ಹಣೆಬರಹದಲ್ಲಿ ಏನಿದೆಯೋ ಅದೇ ಆಗುತ್ತೆ- ಶಿವಣ್ಣ

ಕನ್ನಡದ ಖ್ಯಾತ ನಟ ದರ್ಶನ್ (Darshan) ಸದ್ಯ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣವಾಗಿ ಅರೆಸ್ಟ್ ಆಗಿದ್ದಾರೆ. ಇದೀಗ ದರ್ಶನ್ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಶಿವರಾಜ್‌ಕುಮಾರ್ (ShivaRajkumar) ಪ್ರತಿಕ್ರಿಯೆ ನೀಡಿದ್ದಾರೆ.

ನಟ ಶಿವರಾಜ್‌ಕುಮಾರ್ (Shivarajkumar) ರೇಣುಕಾಸ್ವಾಮಿ ಕೊಲೆ ಪ್ರಕರಣ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಏನು ಮಾಡೋಕೆ ಆಗಲ್ಲ ಹಣೆ ಬರಹ ಅಂತ ಬಂದಾಗ ನಾವು ಏನೇ ಮಾತನಾಡೋಕೆ ಹೋದರು ತಪ್ಪಾಗುತ್ತದೆ ಎಂದಿದ್ದಾರೆ. ಈ ಘಟನೆಯ ಬಗ್ಗೆ ಬೇಸರ ಆಗುತ್ತದೆ. ಹಣೆಬರಹದಲ್ಲಿ ಏನಿದೆಯೋ ಅದೇ ಆಗುತ್ತದೆ. ಈ ಘಟನೆಯಿಂದ ರೇಣುಕಾಸ್ವಾಮಿ ಮತ್ತು ದರ್ಶನ್ ಫ್ಯಾಮಿಲಿಗೂ ನೋವಾಗಿರುತ್ತದೆ. ನಾವು ಎಂದಿಗೂ ನ್ಯಾಯಕ್ಕೆ ತಲೆ ಬಾಗಲೇಬೇಕು ಎಂದಿದ್ದಾರೆ. ಇದನ್ನೂ ಓದಿ: ತಂದೆಯ ಪುಣ್ಯತಿಥಿಗೆ ತಾಯಿ ಜೊತೆ ಗಿಡ ನೆಟ್ಟ ಸಂಸದ ಕಾಗೇರಿ

https://youtu.be/xQiZESZuqCc?si=q8LZ5Uh0VBCWFLF9

ಅಂದಹಾಗೆ, ಜೂನ್ 29ರಂದು ನಟಿ ರಕ್ಷಿತಾ ಮತ್ತು ನಿರ್ದೇಶಕ ಪ್ರೇಮ್ ದಂಪತಿ ಜೈಲಿಗೆ ಆಗಮಿಸಿ ದರ್ಶನ್‌ರನ್ನು ಭೇಟಿ ಮಾಡಿದ್ದರು. ಇದನ್ನೂ ಓದಿ: ಪವಿತ್ರಾಗೌಡ ಪೊಲೀಸರ ಮುಂದೆ ದರ್ಶನ್‌ ವಿರುದ್ಧ ಹೇಳಿಕೆ

Share with Friends
author avatar
News Desk