LatestTop Storiesಬೆಂಗಳೂರು-Bengaluruರಾಜ್ಯ-Karnataka

ಎಲ್ಲ ಪ್ರಕರಣವನ್ನು ಸಿಬಿಐಗೆ ಕೊಡಲು ಸಾಧ್ಯವಿಲ್ಲ: ಪರಂ

ಬೆಂಗಳೂರು: ಮುಡಾ 50:50 ಅನುಪಾತ ಅವ್ಯವಹಾರ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಬಿಜೆಪಿ ನಾಯಕರು ಆಗ್ರಹಿಸಿದ್ದು, ಈ ಕುರಿತು ಗೃಹಸಚಿವ ಜಿ. ಪರಮೇಶ್ವರ್ (G. Parameshwar) ಪ್ರತಿಕ್ರಿಯೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ಕುರಿತು ವೆರಿಫೈ ಮಾಡುತ್ತಿದ್ದಾರೆ. ಎಲ್ಲವನ್ನೂ ಸಿಬಿಐ ಗೆ ಕೊಡಲು ಸಾಧ್ಯವಿಲ್ಲ. ಅವರು ಕೇಳ್ತಾರೆ ಅಂತಾ ಎಲ್ಲವನ್ನೂ ಸಿಬಿಐಗೆ ಕೊಡಲು ಆಗಲ್ಲ ಎಂದು ಹೇಳಿದರು.

ಈಗಾಗಲೇ ಸಿಎಂ ಸ್ಪಷ್ಟನೆ ಕೊಟ್ಟಿದ್ದಾರೆ. ಸಿಬಿಐ ತನಿಖೆಗೆ ಎಲ್ಲವನ್ನೂ ಕೊಟ್ರೆ ಇಲ್ಲೇನೂ ಮಾಡೋ ಆಗಿಲ್ವಾ..?. ಅಸೆಂಬ್ಲಿಯಲ್ಲಿ ಅವರು ಯಾವ ವಿಷಯ ಚರ್ಚೆಗೆ ತಗೋತಾರೋ ಗೊತ್ತಿಲ್ಲ. ಸ್ಪೀಕರ್ ಗೆ ಯಾವ ವಿಚಾರದ ಬಗ್ಗೆ ಲೆಟರ್ ಕೊಡ್ತಾರೋ ನೋಡಬೇಕು. ಬಿಜೆಪಿಯವರಿಗೆ ನಾವು ಉತ್ತರ ಕೊಡ್ತೀವಿ, ಹಿಂಜರಿವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಯುವತಿಯರ ಮುಂದೆ ತಡೆದಿದ್ದಕ್ಕೆ ಕಾಲೇಜ್ ಸೆಕ್ಯೂರಿಟಿ ಹತ್ಯೆ – ಬಾಯ್ಬಿಟ್ಟ ವಿದ್ಯಾರ್ಥಿ

https://youtu.be/JCrzNBZiNqk?si=oUmctOmPCLz1d0qK

ರಾಜ್ಯದಲ್ಲಿ ಹೊಸ ಕಾನೂನು ನೀತಿ ಜಾರಿಗೆ ತರುವುದಕ್ಕೆ ಕಾನೂನು ಸಚಿವರು ಪ್ರಸ್ತಾಪ ಮಾಡಿದ್ದಾರೆ. ಇಂದಿನ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಬರಲಿದೆ. ಗ್ರಾಮ ಮಟ್ಟದಲ್ಲಿ ನ್ಯಾಯ ವ್ಯವಸ್ಥೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಬಗ್ಗೆ ಚರ್ಚೆ ಆಗಲಿದೆ ಎಂದು ಪರಮೇಶ್ವರ್ ಹೇಳಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅಪ್ರಾಪ್ತರ ಬಳಕೆ ಆಗಿಲ್ಲ- ಕೊಂಚ ರಿಲೀಫ್‌

https://youtu.be/MJjBy8hFq3c?si=NgMRqzVBI8zcLw9y

ಬಿಜೆಪಿ ನಾಯಕರು ವಾಗ್ದಾಳಿ: ಮುಡಾ 50:50 ಅನುಪಾತ ಅವ್ಯವಹಾರ ಆರೋಪದ ಕುರಿತು ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ. ಮುಡಾ ಹಗರಣವನ್ನು ಸಿಬಿಐ ತನಿಖೆಗೆ ಆರ್. ಅಶೋಕ್ (R. Ashok) ಆಗ್ರಹಿಸಿದರೆ, ಸಿದ್ದರಾಮಯ್ಯ ಅವರ ತಪ್ಪು ಇಲ್ಲ ಅಂದ್ರೆ ಸಿಬಿಐಗೆ ಕೊಡಲಿ. ಸಿಎಂ ಸಿದ್ದರಾಮಯ್ಯ ಮುಡಾದ ಫಲಾನುಭವಿಗಳು. ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ಮರ್ಯಾದೆ ಉಳಿಸಿಕೊಳ್ಳಲಿ ಎಂದು ಸಿ.ಟಿ ರವಿ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸೂರಜ್ ರೇವಣ್ಣಗೆ ಜೂನ್‌ 18 ರವರೆಗೆ ನ್ಯಾಯಾಂಗ ಬಂಧನ

Share with Friends
author avatar
News Desk