LatestWeatherಉಡುಪಿ-Udupiರಾಜ್ಯ-Karnataka

ಉಡುಪಿಯಲ್ಲಿ ಭಾರೀ ಮಳೆಗೆ ಜನ ತತ್ತರ- 150ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು

ಉಕ್ಕಿ ಹರಿದ ಇಂದ್ರಾಣಿ ತೀರ್ಥ, 150ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು

ಉಡುಪಿ: ಮುಂಗಾರು ಮಳೆ (Monsoon Rain) ಉಡುಪಿ ನಗರದ ಹಲವೆಡೆ ನೆರೆ ಸೃಷ್ಟಿಸಿದೆ. ಇಂದ್ರಾಣಿ ತೀರ್ಥ ಉಕ್ಕಿ ಹರಿದ ಪರಿಣಾಮ ನದಿ ಪಾತ್ರದ ಸ್ಥಳಗಳೆಲ್ಲ ಜಲಾವೃತಗೊಂಡಿದೆ. ಸುಮಾರು ಮೂರು ಗಂಟೆ ಸುರಿದ ರಣ ಮಳೆಗೆ ಉಡುಪಿ ನಗರ (Udupi CIty) ತತ್ತರವಾಗಿದೆ.

ಮಣಿಪಾಲ ಪರ್ಕಳ ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದರಿಂದ ಭಾರೀ ಪ್ರಮಾಣದಲ್ಲಿ ಉಡುಪಿಯತ್ತ ನೀರು ಹರಿದು ಬಂದಿದೆ. ಗದ್ದೆ, ನಗರ ಪ್ರದೇಶ, ಲೇಔಟ್‌ ಒಳಗಡೆ ಕೆಸರು ನೀರು ನುಗ್ಗಿದೆ. ಗುಂಡಿಬೈಲು, ಪಾಡಿಗಾರು, ಮಠದಬೆಟ್ಟು, ಕರಂಬಳ್ಳಿ, ಕಲ್ಸಂಕ ಬೈಲಕೆರೆ, ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶ, ಮೂಡನಿಡಂಬೂರು, ನಿಟ್ಟೂರು, ಮಲ್ಪೆ, ಮಣಿಪಾಲ ಸೇರಿದಂತೆ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, 150ಕ್ಕೂ ಅಧಿಕ ಮನೆಗಳು ಜಲ ದಿಗ್ಭಂಧನಕ್ಕೆ ಒಳಗಾಗಿವೆ. ಕೆಲ ಕಡೆ ಅಂಗಡಿಗಳ ಒಳಗಡೆ ನೀರು ನುಗ್ಗಿದೆ. ಇದರಿಂದಾಗಿ ಭಾರೀ ನಷ್ಟವಾಗಿದೆ. ಇದನ್ನೂ ಓದಿ: ಹಾವೇರಿಯಲ್ಲಿ ಇಲಿ ಜ್ವರಕ್ಕೆ ಮೊದಲ ಬಲಿ

https://youtu.be/-6ae9PQ6T1M?si=3FbB-IY15rA0AbQF

ಇಂದ್ರಾಣಿ ತೀರ್ಥ (Indrani Theertha) ಹರಿಯುವಲ್ಲೆಲ್ಲಾ ಜನಜೀವನ ಅಸ್ತವ್ಯಸ್ತವಾಗಿದೆ. ಭಾರಿ ಮಳೆ (Heavy Rain) ಬಿದ್ದಾಗ ಎಲ್ಲಾ ಕಾಲುವೆಗಳು ತುಂಬಿಕೊಂಡಿರುವುದೇ ಈ ಸಮಸ್ಯೆಗೆ ಕಾರಣ. ಒಳಚರಂಡಿ ಅವ್ಯವಸ್ಥೆಯ ಬಗ್ಗೆ ನೆರೆಪೀಡಿತ ಪ್ರದೇಶದ ಮಹಿಳೆ ಮಾತನಾಡುತ್ತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚಕ್ರ ತೀರ್ಥ ಸಗ್ರಿ ವ್ಯಾಪ್ತಿಯಿಂದ ಎಂಟು ಜನರ ರಕ್ಷಣೆ ಮಾಡಲಾಗಿದೆ. ಅಗ್ನಿಶಾಮಕ ದಳದ ಕಾರ್ಯಾಚರಣೆ ಮುಂದುವರೆದಿದೆ. ಜಲಾವೃತವಾದ ಮನೆಗಳಿಂದ ಮಹಿಳೆಯರು ಮಕ್ಕಳು ವೃದ್ಧರನ್ನ ಕರೆತರಲಾಯಿತು. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆಯಾಗಿ 1 ತಿಂಗಳು- 45 ದಿನಗಳ ಒಳಗೆ ಚಾರ್ಜ್‍ಶೀಟ್ ಸಲ್ಲಿಸಲು ತಯಾರಿ

https://youtu.be/-vvze5itFjY?si=DdXXO9wLUNOSzR6Z

ಅಗ್ನಿಶಾಮಕ ದಳದ ಬೋಟ್ ನಲ್ಲಿ ಜನರನ್ನು ರಕ್ಷಣೆ ಮಾಡಲಾಗಿದೆ. ಮಹಿಳೆಯರು ಮಕ್ಕಳನ್ನು ಎತ್ತರ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ. ನಗರಸಭೆ, ಅಗ್ನಿಶಾಮಕದಳ, ಪೊಲೀಸರು ಮತ್ತು ಸ್ಥಳೀಯರು ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.

ಬೆಳಗ್ಗೆ ಸುರಿದ ಮಳೆಗೆ ಕರಾವಳಿ ಅಂಡರ್ ಪಾಸ್ ಜಲಾವೃತವಾಗಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭಾರೀ ಪ್ರಮಾಣದ ಮಳೆ ನೀರು ತುಂಬಿಕೊಂಡು ವಾಹನ ಓಡಾಟಕ್ಕೆ ಸಮಸ್ಯೆಯಾಗುತ್ತಿದೆ. ದ್ವಿಚಕ್ರ ವಾಹನ ಕಾರು ಬಸ್ಸುಗಳು ಕೃತಕ ನೆರೆ ನೀರಿನಲ್ಲಿ ಓಡಾಟ ಮಾಡುತ್ತಿದೆ. ಇದನ್ನೂ ಓದಿ: ಹಾವೇರಿ ರಸ್ತೆ ಅಪಘಾತ: ಮೃತರ ಕುಟುಂಬಸ್ಥರಿಗೆ ಸಹಾಯ ಮಾಡಿದ ಶಿವಣ್ಣ ದಂಪತಿ

https://youtu.be/3G12MZloIRk?si=d9MX8q3MnkHe7IhN
Share with Friends
author avatar
News Desk