Latestರಾಜಕೀಯ | Politicsರಾಷ್ಟ್ರೀಯ-National

BMW ಹಿಟ್ ಆಂಡ್ ರನ್ ಪ್ರಕರಣ: ಶಿವಸೇನಾ ಉಪ ನಾಯಕ ಸ್ಥಾನದಿಂದ ರಾಜೇಶ್ ಶಾ ವಜಾ

ಮುಂಬೈ: ಮುಂಬೈ ಬಿಎಂಡಬ್ಲ್ಯು ಹಿಟ್ ಅಂಡ್ ರನ್ (BMW Hit and Run Case) ಪ್ರಕರಣದ ಆರೋಪಿ ಮಿಹಿರ್ ಶಾ (Mihir Shah) ಅವರ ತಂದೆ ರಾಜೇಶ್ ಶಾ (Rajesh Shah) ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಶಿವಸೇನೆಯ ಉಪ ನಾಯಕ ಸ್ಥಾನದಿಂದ ಬುಧವಾರ ವಜಾಗೊಳಿಸಿದ್ದಾರೆ.

45 ವರ್ಷದ ಮಹಿಳೆ ಕಾವೇರಿ ನಖ್ವಾ ಅವರ ಸಾವಿಗೆ ಕಾರಣವಾದ ಹಿಟ್ ಅಂಡ್ ರನ್ ಪ್ರಕರಣದ ಪ್ರಮುಖ ಆರೋಪಿ ಆಗಿದ್ದಾರೆ ಮಿಹಿರ್ ಶಾ. ಗುದ್ದೋಡು ಪ್ರಕರಣ ನಡೆದು ಎರಡು ದಿನಗಳ ನಂತರ ಮುಂಬೈ ಪೊಲೀಸರು ಮಂಗಳವಾರ ವಿರಾರ್‌ನಿಂದ ಮಿಹಿರ್ ಶಾ ಅವರನ್ನು ಬಂಧಿಸಿದ್ದಾರೆ.

ಜುಲೈ 7 ಭಾನುವಾರದಂದು ವರ್ಲಿಯ ಡಾ. ಅನ್ನಿ ಬೆಸೆಂಟ್ ರಸ್ತೆಯಲ್ಲಿ ಮಿಹಿರ್ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಮಹಿಳೆ ಸಾವಿಗೀಡಾದ ನಂತರ ಶಾ ತಲೆಮರೆಸಿಕೊಂಡಿದ್ದರು. ಅವರನ್ನು ಬಂಧಿಸಲು ಮುಂಬೈ ಪೊಲೀಸರು ಹದಿನಾಲ್ಕು ತಂಡಗಳನ್ನು ರಚಿಸಲಾಗಿತ್ತು. ಇದನ್ನೂ ಓದಿ: ಮಾಜಿ ಸಚಿವ ನಾಗೇಂದ್ರ ಆಪ್ತ ಹರೀಶ್‌ ಬಂಧನ

https://youtu.be/KYJE8fRBzQE?si=CMnkaamVLHBy9ozI

ಅಪಘಾತದ ಸಮಯದಲ್ಲಿ ಬಿಎಂಡಬ್ಲ್ಯು ಕಾರಿನಲ್ಲಿದ್ದ ರಾಜೇಶ್ ಶಾ ಮತ್ತು ಅವರ ಚಾಲಕ ರಾಜಋಷಿ ಸಿಂಗ್ ಬಿಡಾವತ್ ಅವರನ್ನು ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದರು. ನಂತರ ಮುಂಬೈನ ನ್ಯಾಯಾಲಯ ರಾಜೇಶ್ ಶಾಗೆ ಜಾಮೀನು ನೀಡಿತ್ತು. ಆರೋಪಿ ತಮ್ಮ ನಾಯಕನ ಮಗನಾಗಿರುವುದರಿಂದ ಶಿವಸೇನಾ ಏನೂ ಮಾಡುವುದಿಲ್ಲ ಎಂದು ಹಿಟ್ ಅಂಡ್ ರನ್ ಪ್ರಕರಣದ ಸಂತ್ರಸ್ತೆಯ ಪತಿ ಪ್ರದೀಪ್ ನಖ್ವಾ ಆರೋಪಿಸಿದ್ದಾರೆ. ಇದನ್ನೂ ಓದಿ: ಭವನಿ ರೇವಣ್ಣಗೆ ಮಹಿಳೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ನೋಟಿಸ್‌ ನೀಡಿದ ಸುಪ್ರೀಂ ಕೋರ್ಟ್‌

https://youtu.be/jwlnFvv71rk?si=MSGx7_USUEpT27QA

ಆರೋಪಿ ರಾಜೇಶ್ ಶಾ ಕ್ರಿಮಿನಲ್ ದಾಖಲೆಯನ್ನು ಪೊಲೀಸರು ಪರಿಶೀಲಿಸಬೇಕು ಎಂದು ಸಂಜಯ್ ರಾವುತ್ ಆಗ್ರಹಿಸಿದ್ದಾರೆ. ರಾಜೇಶ್ ಶಾಗೂ ಭೂಗತ ಪಾತಕಿ ಗ್ಯಾಂಗ್‌ಗೂ ಸಂಬಂಧವಿದೆ ಎಂದು ಹೇಳಿರುವ ಅವರು ಶಾ ಮುಖ್ಯಮಂತ್ರಿಗೆ ಹೇಗೆ ವಿಶೇಷ ವ್ಯಕ್ತಿಯಾದರು ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಪಡೆಯಲು ಅರ್ಹರು: ಸುಪ್ರೀಂ ತೀರ್ಪು

Share with Friends
author avatar
News Desk