BlogLatestTop Storiesರಾಜ್ಯ-Karnataka

ಡಿಕೆಶಿ ತಮ್ಮ ಹೆಸರನ್ನು ಡಿಕೆ ಶರೀಫ್ ಎಂದು ಬದಲಾಯಿಸಿಕೊಳ್ಳಲಿ : ಮುತಾಲಿಕ್ ಆಕ್ರೋಶ

ಗದಗ: ಡಿಕೆ ಶಿವಕುಮಾರ್ ಅವರು ತಮ್ಮ ಹೆಸರನ್ನು ಡಿಕೆ ಶರೀಫ್ ಎಂದು ಬದಲಾಯಿಸಲಿ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,

ಸಚಿವ ಸಂಪುಟ ಸಭೆಯಲ್ಲಿ ರಾಮನಗರ ಜಿಲ್ಲೆಯನ್ನು ಬೆಂಗಳೂರು ಜಿಲ್ಲೆಯಾಗಿ ಮಾಡಿದ್ದನ್ನು ಶ್ರೀರಾಮ ಸೇನೆ ಪ್ರಬಲವಾಗಿ ವಿರೋಧಿಸುತ್ತದೆ. `ರಾಮನಗರ’ ಹೆಸರು ಇರುವುದಕ್ಕೆ ಕಾಂಗ್ರೇಸ್ ಗೆ ಏನು ತೊಂದರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮನಗರ ಜಿಲ್ಲೆಯ ಹೆಸರು ಪರಿವರ್ತನೆ ಮಾಡಿದ್ದು ಹಿಂದೂ ದ್ರೋಹಿ ಕೇಲಸವಾಗಿದೆ ಎಂದು ಅಭಿಪ್ರಾಯಪಟ್ಟಿರುವ ಅವರು ಈ ಬಗ್ಗೆ ರಾಜ್ಯಾದ್ಯಂತ ಹೋರಾಟ ನಡೆಸುವುದಕ್ಕಾಗಿ ಎಚ್ಚರಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಹಿಂದೂ ವಿರೋಧಿ ಕೇಲಸ ಮಾಡುತ್ತಾ ಬಂದಿದೆ. ಕಾಂಗ್ರೆಸ್ ಬಾಬರ್ ನನ್ನು ಬೆಂಬಲಿಸಿದೆ ಎಂದು ಆರೋಪಿಸಿದರು.

ಬೆಂಗಳೂರಿನಲ್ಲಿ 32 ಕಡೆಗಳಲ್ಲಿ ಇವೆ. ಮೊದಲು ಅವುಗಳನ್ನು ಬದಲಾವಣೆ ಮಾಡಲಿ. ನಿಮಗೆ ನಿಜವಾಗಲೂ ಸ್ವಾಭಿಮಾನ ಇದ್ದರೇ ಬ್ರಿಟಿಷರ ಹೆಸರು ಬದಲಾಯಿಸಿ. ಡಿಕೆ ಶಿವಕುಮಾರ ಅವರು ತಮ್ಮ ಹೆಸರನ್ನು ಡಿ ಕೆ ಶರೀಫ ಎಂದು ಬದಲಾಯಿಸಿಕೊಳ್ಳಲಿ. ರಾಮನಗರಕ್ಕೆ ತನ್ನದೇ ಆದ ಇತಿಹಾಸ ಇದೆ. ಭಾನುವಾರ ಕಲಬುರ್ಗಿಯಲ್ಲಿ ಸಭೆ ನಡೆಸಿ ಇಡೀ ರಾಜ್ಯಾದ್ಯಂತ ಹೋರಾಟದ ಬಗ್ಗೆ ಚರ್ಚಿಸಲಿದ್ದೇವೆ ಎಂದರು.

ನಾಯಿ ಮಾಂಸ ತಿನ್ನಿಸಿದ ಅಬ್ದುಲ್ ರಜಾಕ್ :
ಕಳೆದ 15 ವರ್ಷಗಳಿಂದ ಅಬ್ದುಲ್​ ರಜಾಕ್​ ಬೆಂಗಳೂರಿನ ಜನತೆಗೆ ಕುರಿ ಮಾಂಸದ ಹೆಸರಿನಲ್ಲಿ ನಾಯಿ ಮಾಂಸ ತಿನ್ನಿಸುತ್ತಿದ್ದಾನೆ ಎಂದು ಶ್ರೀರಾಮ ಸೇಬೆ ಮುಖ್ಯಸ್ಥ ಪ್ರಮೋದ್​ ಮುತಾಲಿಕ್​ ಕಿಡಿಕಾರಿದ್ದಾರೆ.

ಬೆಂಗಳೂರಿನ ರೈಲ್ವೆ ಸ್ಟೆಷನಲ್ಲಿ ಸುಮಾರು 90 ಮಾಂಸದ ಬಾಕ್ಸ್ ಗಳು ಸಿಕ್ಕಿವೆ. ಅವು ನಾಯಿ ಮಾಂಸ ಇರುವ ಬಾಕ್ಸ್ ಗಳು. ಕಳೆದ 15 ವರ್ಷದಿಂದ ಅಬ್ದುಲ್ ರಜಾಕ್ ಎನ್ನುವ ವ್ಯಕ್ತಿ ನಾಯಿ ಮಾಂಸವನ್ನು ಜನರಿಗೆ ತಿನ್ನಿಸುತ್ತಿದ್ದಾನೆ. ಇಷ್ಟೆಲ್ಲ ನಡೆಯುತ್ತಿದ್ದರೂ ಬಿಬಿಎಂಪಿ ಅಧ್ಯಕ್ಷರು ಕತ್ತೆ ಕಾಯುತ್ತಿದ್ದಾರಾ? ಹಿಂದೂಗಳೇ ರುಚಿ-ರುಚಿಯಾದ ಹಂದಿ, ನಾಯಿ, ನರಿ, ಬೆಕ್ಕಿನ ಮಾಂಸ ತಿನ್ನಿರಿ ಎಂದು ಹಿಂದೂಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಅಬ್ದುಲ್ ರಜಾಕ್ ಎಂಬ ಒಬ್ಬ ದೇಶದ್ರೋಹಿ ಈ ಕೇಲಸ ಮಾಡುತ್ತಿದ್ದಾನೆ. ರಾಜಸ್ಥಾನದಿಂದ ನಾಯಿ ಮಾಂಸ ತರಿಸಿ ಮಾರುತ್ತಿದ್ದಾನೆ. ಅಬ್ದುಲ್ ರಜಾಕ್ ಬೆನ್ನಿಗೆ ಸಚಿವ ಜಮೀರ್ ಅಹ್ಮದ್ ನಿಂತಿದ್ದಾರೆ. ಹಿಂದೂಗಳು ಈಗಲಾದರೂ ಎಚ್ಚರಗೊಳ್ಳಬೇಕು. ಮುಸ್ಲಿಮರ ಅಂಗಡಿಯಲ್ಲಿ ಆಹಾರ ತಿನ್ನುವುದನ್ನು ನಿಲ್ಲಿಸಬೇಕು. ನಾಯಿ ಮಾಂಸದ ಬಾಕ್ಸ್ ಮೇಲೆ ಮೀನಿನ ಮಾಂಸ ಎಂದು ಬರೆದು ಮೋಸ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

Share with Friends
author avatar
News Desk