BlogEntertainmentLatestTop Stories

ರೇಣುಕಾಸ್ವಾಮಿ ಕೊಲೆ ಪ್ರಕರಣ : ಶೀಘ್ರವೇ ಪೊಲೀಸರ ಕೈಸೇರಲಿದೆ FSL ವರದಿ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರವೇ ಎಫ್ ಎಸ್ ಎಲ್ ರಿಪೋರ್ಟ್ ಪೊಲೀಸರ ಕೈ ಸೇರಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದಲ್ಲಿ ಎಫ್ ಎಸ್ ಎಲ್ ರಿಪೋರ್ಟ್ ಪೊಲೀಸರ ಕೈ
ಸೇರಲಿದ್ದು, ಆರೋಪಿಗಳು ಬಳಸಿದ ಬಟ್ಟೆಯಿಂದ ಹಿಡಿದು ಬೆಲ್ಟ್, ಶೂ ತನಕ. ವಾಹನ, ಗೇಟ್ , ಕೊಲೆಗೆ ಬಳಸಿದ ಆಯುಧ ಸೇರಿದಂತೆ ಎಲ್ಲಾವಸ್ತುಗಳ ಎಫ್ ಎಸ್ ಎಲ್ ರಿಪೋರ್ಟ್ ಪೊಲೀಸರ ಕೈ ಸೇರಲಿದೆ.

ಈ ಮೂಲಕ ಕೊಲೆ ಪ್ರಕರಣದ ಪ್ರಮುಖ ಸಾಕ್ಷ್ಯಗಳು ಪೊಲೀಸರ ಕೈ ಸೇರಲಿದೆ. ಈಗಾಗಲೇ ರೇಣುಕಾಸ್ವಾಮಿ ಮೊಬೈಲ್ ರಿಟ್ರೀವ್
ಮಾಡಲಾಗಿದ್ದು, ಎಲ್ಲಾದರ್ಶನ್ & ಗ್ಯಾಂಗ್ ಗೆ ದೊ ಡ್ಡಉರುಳಾಗುವ ಸಾಧ್ಯತೆಯಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿನಟ ದರ್ಶನ್ ಮತ್ತು ಗ್ಯಾಂಗ್ ಬಂಧನವಾಗಿದ್ದು, ಸದ್ಯ ಸೆರೆಮನೆ ವಾಸ ಅನುಭವಿಸುತ್ತಿದೆ. ಸದ್ಯದಲ್ಲೇ ಪೊಲೀಸರು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದೆ.

Share with Friends
author avatar
News Desk