BlogHealth | ಆರೋಗ್ಯLatestTop Storiesರಾಜ್ಯ-Karnataka

ಮನೆ ಬಾಗಿಲಿಗೆ ಆರೋಗ್ಯ ಸೇವೆ : ಗೃಹ ಆರೋಗ್ಯ ಯೋಜನೆ ಜಾರಿಗೆ ಸಿದ್ಧತೆ

ಬೆಂಗಳೂರು : ರಾಜ್ಯ ಸರ್ಕಾರವು ಮತ್ತೊಂದು ಮಹತ್ವದ ಯೋಜನೆ ಜಾರಿಗೆ ತಂದಿದ್ದು, ಮನೆ ಬಾಗಿಲಿಗೆ ಆರೋಗ್ಯ ಸೇವೆ ಒದಗಿಸುವ ಗೃಹ ಆರೋಗ್ಯ ಯೋಜನೆ ಜಾರಿಗೆ ತರಲು ಸಿದ್ಧತೆ ನಡೆಸಿದೆ.

ಈ ಕುರಿತು ಮಾಹಿತಿ ನೀಡಿರುವ ಸಚಿವ ದಿನೇಶ್ ಗುಂಡೂರಾವ್, ರಾಜ್ಯ ಸರ್ಕಾರವು ಗೃಹ ಆರೋಗ್ಯ ಯೋಜನೆ ಮೊದಲ ಹಂತದಲ್ಲಿ ಎಂಟು ಜಿಲ್ಲೆಗಳಲ್ಲಿ ಮುಂದಿನ ತಿಂಗಳಿನಿಂದ ಆರಂಭವಾಗಲಿದೆ. ಈ ಯೋಜನೆಯ ಆರಂಭದ ದಿನಾಂಕವನ್ನು ಬುಧವಾರ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.

ಗೃಹ ಆರೋಗ್ಯ ಯೋಜನೆಯ ಮೂಲಕ ಮಧುಮೇಹ, ಅಧಿಕ ರಕ್ತದೊತ್ತಡ ಸೇರಿ ಇತರೆ ಆರೋಗ್ಯ ಸಮಸ್ಯೆ ಇರುವವರಿಗೆ ಮೂರು ತಿಂಗಳಿಗೆ ಆಗುವಷ್ಟು ಮಾತ್ರೆಗಳನ್ನು ಮನೆಗಳಿಗೆ ನೇರವಾಗಿ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ಡಯಾಬಿಟಿಕ್, ಪ್ರಿ –ಡಯಾಬಿಟಿಕ್ ಪತ್ತೆ ಹಚ್ಚುವ ನಿಟ್ಟಿನಲ್ಲಿ ಜಿಲ್ಲಾ ಆಸ್ಪತ್ರೆಗಳಲ್ಲಿ ಸಮುದಾಯ ಮಧುಮೇಹ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Share with Friends
author avatar
News Desk