BlogLatestTop Storiesರಾಜ್ಯ-Karnataka

ಲಾಲ್ ಬಾಗ್ ಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಇಂದು ಲಾಲ್​ಬಾಗ್​ನ ಗಾಜಿನಮನೆಯಲ್ಲಿ ಫ್ಲವರ್​ಶೋಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಮೊಮ್ಮಗ ಯಶವಂತ್ ಅಂಬೇಡ್ಕರ್ ಅವರು ಕೂಡ ಭಾಗಿಯಾಗಿದ್ದಾರೆ.

ಈ ವರ್ಷ ಸಂವಿಧಾನ ಶಿಲ್ಪಿ ಡಾ ಬಿ.ಆರ್. ಅಂಬೇಡ್ಕರ್ ಅವರ ಕಾನ್ಸೆಪ್ಟ್ ನಲ್ಲಿ ಫ್ಲವರ್ ಶೋ ಮೂಡಿಬಂದಿದ್ದು, ಆಗಸ್ಟ್ 19ರವರೆಗೂ ನಲ್ಲಿ ಫ್ಲವರ್ ಶೋ ಇರಲಿದೆ. ಸಂಸತ್, ಭೀಮ ಸ್ಮರಾಕ, ಅಂಬೇಡ್ಕರ್ ಅವರು ಹುಟ್ಟಿದ ಜಾಗ, ಅವರು ಹುಟ್ಟಿ ಬೆಳೆದು ಬಂದಂತಹ ಹಾದಿ ಹೇಗಿತ್ತು ಎನ್ನುವುದು ಪ್ಲವರ್ ಶೋ ನ ಪ್ರಮುಖ ಆಕರ್ಷಣೆಗಳಾಗಿವೆ.‌

ಈ 12 ದಿನಗಳ ಈ ಪ್ರದರ್ಶನಕ್ಕೆ 2.80 ಕೋಟಿ ರೂ. ವ್ಯಯಿಸಲಾಗುತ್ತಿದೆ.‌ ಕಳೆದ ಪ್ಲವರ್ ಶೋ ನಲ್ಲಿ ಕಳೆದ ಬಾರಿ 60-70 ಲಕ್ಷ ರೂ. ಆದಾಯ ಹರಿದು ಬಂದಿತ್ತು. ಈ ವರ್ಷ ಅದಕ್ಕಿಂತ ಹೆಚ್ಚು ಆದಾಯ ಬರುವ ಸಾಧ್ಯಾತೆ ಇದೆ.‌ ಹೀಗಾಗಿ ಪ್ರದರ್ಶನಕ್ಕೆ ಬರುವ ಜನರ ಅನುಕೂಲಕ್ಕಾಗಿ ಆನ್‌ಲೈನ್‌ ಟಿಕೆಟ್‌ ವ್ಯವಸ್ಥೆ ಮಾಡಲಾಗಿದೆ.

ವಯಸ್ಕರಿಗೆ 100 ರೂ, ಮಕ್ಕಳಿಗೆ 30 ರೂ.ಪ್ರವೇಶ ಶುಲ್ಕ ನಿಗದಿಪಡಿಸಿದ್ದು, ಶಾಲಾ ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ತುರ್ತು ಚಿಕಿತ್ಸೆಗಾಗಿ 6 ಆಂಬ್ಯುಲೆಸ್ಸ್‌ ಸೇವೆ ಒದಗಿಸಲಾಗಿದೆ. ಡೆಂಗ್ಯು ಆತಂಕದಿಂದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದ್ದು, ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ.

ಕುಡಿಯುವ ನೀರಿಗಾಗಿ 18 ಕಡೆ ವ್ಯವಸ್ಥೆ ಮಾಡಿದ್ದು, ಹೆಚ್ಚುವರಿ ಸಂಚಾರಿ ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ 136 ಸಿಸಿ ಟಿವಿ ಕ್ಯಾಮೆರಾಗಳು, 400 ಪೊಲೀಸರು, ಬಿಬಿಎಂಪಿ ಮಾರ್ಷಲ್‌ ಹಾಗೂ ಲಾಲ್‌ಬಾಗ್‌ ಸಿಬ್ಬಂದಿ ಭದ್ರತೆ ಒದಗಿಸಿದ್ದು, ಲಾಲ್ ಬಾಗ್ ನಾ ನಾಲ್ಕು ಗೇಟ್ ಗಳಲ್ಲಿ ಫ್ಲವರ್ ಶೋ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ.

Share with Friends
author avatar
News Desk