ಯಾತ್ರಾರ್ಥಿಗಳಿದ್ದ ಬಸ್ ಮೇಲೆ ದಾಳಿಗೆ ಹೊಣೆ ಹೊತ್ತ ಪಾಕ್ ಉಗ್ರ ಸಂಘಟನೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ರಿಯಾಸಿಯಲ್ಲಿ (Reasi) ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ನ ಮೇಲೆ ನಡೆದ ಭಯೋತ್ಪಾದಕ ದಾಳಿಯ ಹೊಣೆಯನ್ನು ಪಾಕಿಸ್ತಾನ ಬೆಂಬಲಿತ ಉಗ್ರ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಹೊತ್ತುಕೊಂಡಿದೆ.
ಉಗ್ರ ಸಂಘಟನೆ ದಾಳಿ ಬಗ್ಗೆ ಸಂದೇಶವನ್ನು ರವಾನಿಸಿದೆ. ಸಂದೇಶದಲ್ಲಿ ಇದು ಆರಂಭ, ಪ್ರವಾಸಿಗರು ಮತ್ತು ಸ್ಥಳೀಯರಲ್ಲದವರ ಮೇಲೆ ಹೆಚ್ಚಿನ ದಾಳಿ ನಡೆಸಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದೆ. ಇದನ್ನೂ ಓದಿ: ಪತ್ನಿಯನ್ನು ಹತ್ಯೆಗೈದಿದ್ದ ಪಾಪಿ ಪತಿ – ಆರೋಪಿ ಬಂಧನ
ಭಯೋತ್ಪಾದಕರ ಪತ್ತೆಗೆ ಭಾರತೀಯ ಸೇನೆ ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದೆ. ಈ ಪ್ರದೇಶದಲ್ಲಿ ಭದ್ರತೆಯನ್ನು ಬಲಪಡಿಸಲಾಗಿದೆ. ದಾಳಿಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ವಹಿಸಲಾಗಿದೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಪ್ರಜ್ವಲ್ ವಿರುದ್ಧದ ಅತ್ಯಾಚಾರ ಅಪಹರಣ- ಬಸವನಗುಡಿ ನಿವಾಸದಲ್ಲಿ ಎಸ್ಐಟಿ ಮಹಜರು
ಭಾನುವಾರ (ಜೂ.9) ಮಾತಾ ವೈಷ್ಣೋ ದೇವಿ (Vaishno Devi Temple) ದೇಗುಲದ ಕತ್ರಾ ಮಾರ್ಗವಾಗಿ ಶಿವ ಖೋರಿ ದೇಗುಲದಿಂದ ಯಾತ್ರಾರ್ಥಿಗಳು ಬಸ್ನಲ್ಲಿ ಹಿಂತಿರುಗುತ್ತಿದ್ದ ವೇಳೆ ಉಗ್ರರು ದಾಳಿ ನಡೆಸಿದ್ದರು. ಏಕಾಏಕಿ ಉಗ್ರರು ಗುಂಡಿನ ದಾಳಿ ನಡೆಸಿದ್ದ ಪರಿಣಾಮ ಬಸ್ಸಿನ ಚಾಲಕನಿಗೆ ಬುಲೆಟ್ ತಗುಲಿ ವಾಹನ ಕಮರಿಗೆ ಉರುಳಿತ್ತು. ಘಟನೆಯಲ್ಲಿ ಬಸ್ ಕಂಡಕ್ಟರ್ ಮತ್ತು ಚಾಲಕ ಸೇರಿ 9 ಮಂದಿ ಸಾವನ್ನಪ್ಪಿದ್ದರು. ಇದನ್ನೂ ಓದಿ: ಯುವರಾಜ್ ಕುಮಾರ್ ದಾಂಪತ್ಯದಲ್ಲಿ ಬಿರುಕು- ರಾಜ್ ಕುಟುಂಬದಲ್ಲಿ ಮೊದಲ ಡಿವೋರ್ಸ್ ಗಾಳಿ
ಭಾರತವು 2023 ರಲ್ಲಿ ದಿ ರೆಸಿಸ್ಟೆನ್ಸ್ ಫ್ರಂಟ್ನ್ನು ಭಯೋತ್ಪಾದಕ ಸಂಘಟನೆ ಎಂದು ಗೊತ್ತುಪಡಿಸಿತು. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಈ ಸಂಘಟನೆ ಸ್ಥಾಪನೆಯಾಗಿತ್ತು. ಇದಾದ ಬಳಿಕ ಹಲವಾರು ಭಯೋತ್ಪಾಕ ಕೃತ್ಯಗಳಲ್ಲಿ ಸಂಘಟನೆ ಭಾಗಿಯಾಗಿತ್ತು. ಇದನ್ನೂ ಓದಿ: 25 ವರ್ಷಗಳ ಬಳಿಕ ಕೇಂದ್ರದಲ್ಲಿ ಜೆಡಿಎಸ್ಗೆ ಸ್ಥಾನ- ಹೆಚ್ಡಿಕೆ ಸವಾಲುಗಳೇನು?
