Crime NewsLatestಬೆಂಗಳೂರು-Bengaluruರಾಜ್ಯ-Karnataka

ಹಸುಗೂಸನ್ನು ರಸ್ತೆ ಬದಿಗೆ ಎಸೆದ ಅನಾಮಿಕರು

ಬೆಂಗಳೂರು: ಅನಾಮಿಕರು ಹಸುಗೂಸನ್ನು (Just born Baby) ರಸ್ತೆ ಬದಿಗೆ ಎಸೆದು ಹೋದ ಅಮಾನವೀಯ ಘಟನೆ ನಗರದಲ್ಲಿ ನಡೆದಿದೆ.

ಹುಟ್ಟಿ ಕೆಲವೇ ಗಂಟೆಯಾಗಿರುವ ಹಸುಗೂಸನ್ನು ಯಲಹಂಕದ (Yelhanka) ಅಟ್ಟೂರು ಬಸ್ ನಿಲ್ದಾಣದ ಬಳಿ ಮಗುವನ್ನು ರಸ್ತೆ ಬದಿಗೆ ಎಸೆದು ಹೋಗಿದ್ದಾರೆ. ಇದನ್ನೂ ಓದಿ: ಕಿಡ್ನಾಪ್‌ ಪ್ರಕರಣ: ರೇವಣ್ಣ ಜಾಮೀನು ರದ್ದು ಕೋರಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ

https://youtu.be/dk_w_0Q0tmE?si=-yS5grDy1IEbWZwg

ಬಸ್ ನಿಲ್ದಾಣದ ಬಳಿ ಇರುವ ಗೂಡ್ಸ್ ಸ್ಟ್ಯಾಂಡ್ ಬಳಿ ಶಿಶು ಪತ್ತೆಯಾಗಿದೆ. ಮಗು ಅಳುತ್ತಿದ್ದ ಶಬ್ಧ ಕೇಳಿದ ಸ್ಥಳೀಯರು ಮಗುವನ್ನು ರಕ್ಷಿಸಿದ್ದಾರೆ. ಸದ್ಯ ಮಗುವಿಗೆ ಯಲಹಂಕದ ಈಶಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: A2 ಆರೋಪಿ ರೇವಣ್ಣ ಬಂಧನ ಅನುಮಾನಾಸ್ಪದಾ

https://youtu.be/kagAomYJ8WM?si=l4GMMhdTpqsifoyz

ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಯಲಹಂಕ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ದಿನೇ ದಿನೇ ಹೆಚ್ಚಾಗುತಿದೆ ಡೆಂಗ್ಯೂ ಪ್ರಕರಣಗಳು

Share with Friends
author avatar
News Desk