Latestರಾಷ್ಟ್ರೀಯ-National

ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಪ್ರಮಾಣ ವಚನ ಸ್ವೀಕಾರ – ನೂತನ ಸಂಸದರಿಗೆ ಸ್ವಾಗತ ಕೋರಿದ ಮೋದಿ

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ (Parliament Session) ಸೋಮವಾರ (ಜೂ.24) ಆರಂಭಗೊಂಡಿದ್ದು, ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ (Bhartruhari Mahtab) ಮತ್ತು ಸಂಸದರಾಗಿ ಮೋದಿ ಪ್ರ,ಮಾನವಚನ ಸ್ವೀಕರಿಸಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಕರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಪ್ರಮಾಣ ವಚನ ಬೋಧಿಸಿದರು. ನಂತರ ಸಂಸತ್‌ ಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ವಾರಣಾಸಿ ಕ್ಷೇತ್ರದ ಸಂಸರಾಗಿ ಪ್ರಮಾಣ ವಚನ ಸ್ವೀಕರಿಸಿದರು.

https://youtu.be/OvXrOZlPR8I?si=l88I3Hy6KvmhTHMt

ಅಧಿವೇಶನದ ಮೊದಲ ದಿನವಾದ ಸೋಮವಾರ 280 ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದು, ಮಂಗಳವಾರ 264 ಹೊಸದಾಗಿ ಚುನಾಯಿತರಾದ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜೂನ್ 26 ರಂದು ಲೋಕಸಭಾ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಯಲಿದೆ. ಇದನ್ನೂ ಓದಿ: ಕಂದಾಯ ಸಚಿವ ಇದ್ದಾಗಲೇ  ಕಲಬುರುಗಿ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ

ಜೂನ್ 27 ರಂದು ಸಂಸತ್ತಿನ ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿಗಳು ಭಾಷಣ ಮಾಡಲಿದ್ದಾರೆ. ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತಾ ನಿರ್ಣಯದ ಮೇಲಿನ ಚರ್ಚೆ ಜೂನ್ 28 ರಂದು ಪ್ರಾರಂಭವಾಗುತ್ತದೆ. ಜುಲೈ 2 ಅಥವಾ 3 ರಂದು ಪ್ರಧಾನಿ ಮೋದಿ ಚರ್ಚೆಗೆ ಪ್ರತಿಕ್ರಿಯಿಸುವ ನಿರೀಕ್ಷೆಯಿದೆ. ಬಳಿಕ ಎರಡೂ ಸದನಗಳು ಮುಂದೂಡಿಕೆಯಾಗಲಿದ್ದು ಕೇಂದ್ರ ಬಜೆಟ್ ಮಂಡನೆಗಾಗಿ ಜುಲೈ 22 ರಂದು ಮತ್ತೆ ಸೇರಲಿವೆ.

ಮುಂದುವರಿದು 18ನೇ ಲೋಕಸಭೆ ಕಲಾಪ ಆರಂಭವಾಗುತ್ತಿದ್ದು, ವಿಶ್ವದ ಅತಿದೊಡ್ಡ ಚುನಾವಣೆಯನ್ನು ಅತ್ಯಂತ ಅದ್ಧೂರಿ ಮತ್ತು ವೈಭವಯುತವಾಗಿ ನಡೆಸಲಾಯಿತು. ಈ ಚುನಾವನೆಯು ಬಹಳ ಮಹತ್ವದ್ದಾಗಿತ್ತು. ದೇಶದ ಜನರು ಸತತ 3ನೇ ಬಾರಿಗೆ ಸೇವೆ ಸಲ್ಲಿಸಲು ಸರ್ಕಾರಕ್ಕೆ ಅವಕಾಶ ನೀಡಿದ್ದಾರೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ 17ರ ಯುವಕನ ಬರ್ಬರ ಹತ್ಯೆ!

Share with Friends
author avatar
News Desk