Latestರಾಜ್ಯ-Karnatakaಹಾಸನ-Hassan

ಇಂದು ಭವಾನಿ ರೇವಣ್ಣವಿಚಾರಣೆಗೆ ಗೈರು – ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ ಮೊರೆ ಹೋದ ಭವಾನಿ

ಹಾಸನ: ಅಪಹರಣ ಪ್ರಕರಣದಲ್ಲಿ ಹೆಚ್​​ಡಿ ರೇವಣ್ಣ (HD Revanna) ಕುಟುಂಬಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಸದ್ಯಕ್ಕೆ ಬಗೆಹರಿಯುವ ಲಕ್ಷಣಗಳಿಲ್ಲ. ಆದರೆ ಭವಾನಿ ರೇವಣ್ಣ (Bhavani Revanna) ಇದೀಗ ತಲೆಮರೆಸಿಕೊಂಡಿರುವುದು ಎಸ್​ಐಟಿಯ ತಲೆನೋವಿಗೆ ಕಾರಣವಾಗಿದೆ.

34 ದಿನಗಳ ಕಾಲ ಕಣ್ಣಾಮುಚ್ಚಾಲೆ ಆಡಿದ್ದ ಪ್ರಜ್ವಲ್ ಇದೀಗ ಎಸ್​ಐಟಿ ಖೆಡ್ಡಾಕ್ಕೆ ಬಿದ್ದಾಗಿದೆ. ಪೆನ್​ಡ್ರೈವ್ ಕೇಸ್​ಗೆ ಅಂಟಿಕೊಂಡಿರುವ ಮಹಿಳೆಯ ಕಿಡ್ನ್ಯಾಪ್ ಪ್ರಕರಣ ಭವಾನಿ ರೇವಣ್ಣಗೆ ಮುಳುವಾಗಿದೆ. ಇದನ್ನೂ ಓದಿ: ಮುಂದುವರಿದ ಬಾಂಬ್‌ ಬೆದರಿಕೆಗಳು -ಇಂಡಿಗೋ ವಿಮಾನಕ್ಕೆ ಮತ್ತೆ ಬೆದರಿಕೆ

ಭವಾನಿ ರೇವಣ್ಣಗೆ ಎಸ್​ಐಟಿ ಎರಡೆರಡು ನೋಟಿಸ್ ಕೊಟ್ಟಿತ್ತು. ಮನೆಯಲ್ಲೇ ವಿಚಾರಣೆಗೆ ಹಾಜರಾಗುವುದಾಗಿ ಭವಾನಿ ಪತ್ರ ಬರೆದಿದ್ದರು. ಪತ್ರದಂತೆ ಎಸ್​ಐಟಿ ಅಧಿಕಾರಿಗಳು ಹೊಳೆನರಸೀಪುರದಲ್ಲಿರುವ ನಿವಾಸಕ್ಕೆ ಬಂದಿದ್ದಾರೆ. ಆದರೆ, ಮನೆಯೊಳಗೆ ಹೋದ ಎಸ್​ಐಟಿ ಅಧಿಕಾರಿಗಳಿಗೆ ಶಾಕ್ ಕಾದಿದೆ. ಭವಾನಿ ರೇವಣ್ಣ ಮನೆಯಲ್ಲಿದ್ದ ಇರದ ಕಾರಣ, ಸಂಜೆ 5ವರೆಗೆ ಕಾಯಲಿದ್ದಾರೆ.ಇದನ್ನೂ ಓದಿ: ನಾಳೆಯಿಂದ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆ

https://youtu.be/Xmp5YfB-Rt4?si=vY6fGzaHQt9U5cht

ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಪರ ವಕೀಲರು ಜನಪ್ರತಿನಿಧಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಆದರೆ ಶುಕ್ರವಾರ ಅರ್ಜಿ ವಜಾಗೊಂಡಿದೆ. ಈ ಹಿನ್ನೆಲೆಯಲ್ಲಿ ಬಂಧನ ಭೀತಿಯಿಂದ ಪ್ರಜ್ವಲ್‌ ತಾಯಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಸೋಮವಾರ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ. ಇದನ್ನೂ ಓದಿ: ಲೋಕಸಭೆ ಚುನಾವಣೆ: ದೇಶದಲ್ಲಿ ಮೋದಿ ಅಲೆ ಇದೆ – ಮತದಾನದ ಬಳಿಕ ಕಂಗನಾ ಪ್ರತಿಕ್ರಿಯೆ

https://youtu.be/r32NMq7j5QU?si=87jo6sRlofCZBs3z
Share with Friends
author avatar
News Desk