BlogLatestರಾಜಕೀಯ | Politicsರಾಜ್ಯ-Karnataka

ಚನ್ನಪಟ್ಟಣ ಉಪಚುನಾವಣೆ ಫಲಿತಾಂಶ : ಯೋಗೇಶ್ವರ್ ದಾಖಲೆ ಗೆಲುವು, ನಿಖಿಲ್ ಹ್ಯಾಟ್ರಿಕ್ ಸೋಲು

ಚನ್ನಪಟ್ಟಣ : ಕರ್ನಾಟಕದ ಮೂರು ವಿಧಾನಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್​ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್​ನ ಸಿಪಿ ಯೋಗೇಶ್ವರ್ ಗೆಲುವು ದಾಖಲಿಸಿದ್ದಾರೆ. ಚನ್ನಪಟ್ಟಣ ಉಪಚುನಾವಣೆ ಮತ ಎಣಿಕೆ ಮುಕ್ತಾಯವಾಗಿದ್ದು, ಯೋಗೇಶ್ವರ್ 25,515 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಅದರೊಂದಿಗೆ, ಕೊನೇ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿ ಸ್ಪರ್ಧಿಸಿದ್ದ ಯೋಗೇಶ್ವರ್​​ ಅವರನ್ನು ಮತದಾರರು ‘ಕೈ’ ಹಿಡಿದಿದ್ದಾರೆ. ಅತ್ತ ನಿಖಿಲ್​ಗೆ ಮೂರನೇ ಬಾರಿಯೂ ಮುಖಭಂಗವಾಗಿದೆ. ಈ ಹಿಂದೆ ಮಂಡ್ಯದಿಂದ ಲೋಕಸಭೆ ಚುನಾವಣೆ, ರಾಮನಗರದಿಂದ ವಿಧಾನಸಭೆ ಚುನಾವಣೆ ಸ್ಪರ್ಧಿಸಿ ಸೋಲುಂಡಿದ್ದ ಅವರು, ಇದೀಗ ಮೂರನೇ ಪ್ರಯತ್ನದಲ್ಲಿಯೂ ವಿಫಲರಾಗಿದ್ದಾರೆ.

ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆದರೂ, ಚನ್ನಪಟ್ಟಣದಲ್ಲಿ ಈ ಬಾರಿ ಜಿದ್ದಾಜಿದ್ದಿ ಜೋರಾಗಿತ್ತು. 2018ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಸೋಲು. 2023ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ರಾಮನಗರದಲ್ಲಿ ಸೋಲು.

ಹೀಗೆ ಎರಡು ಸೋಲು ಕಂಡಿದ್ದ ಜೆಡಿಎಸ್​ನ ನಿಖಿಲ್ ಕುಮಾರಸ್ವಾಮಿ ಈಬಾರಿ ಚನ್ನಪಟ್ಟಣದಲ್ಲಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಅತ್ತ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿರುವ ಸಿಪಿ ಯೋಗೇಶ್ವರ್​ಗೆ ಕೂಡಾ ಈ ಚುನಾವಣೆ ಅಗ್ನಿ ಪರೀಕ್ಷೆಯಾಗಿತ್ತು. ನಿಖಿಲ್, ಯೋಗೇಶ್ವರ್ ಅಭ್ಯರ್ಥಿಯಾದರೂ, ಇದು ಹೆಚ್​ಡಿ ಕುಮಾರಸ್ವಾಮಿ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಯುದ್ಧವೇ ಆಗಿತ್ತು.

Share with Friends
author avatar
News Desk