Latestಬೆಂಗಳೂರು-Bengaluruರಾಜ್ಯ-Karnataka

ಶಾಸಕರು ಇರೋದು ಶಾಸನ ರೂಪಿಸಲು- ಹರೀಶ್ ಪೂಂಜಾಗೆ ಹೈಕೋರ್ಟ್ ನಲ್ಲಿ ಕ್ಲಾಸ್‌

ಬೆಂಗಳೂರು: ಪೊಲೀಸರು ಭಯೋತ್ಪಾದಕರನ್ನು ಹಿಡಿದು ತಂದಾಗಲೂ ಪೊಲೀಸ್ ಠಾಣೆಗೆ ನುಗ್ತೀರಾ ಎಂದು ಬೆಳ್ತಂಗಡಿ (Belthangady) ಶಾಸಕ ಹರೀಶ್ ಪೂಂಜಾ (Harish Poonja) ಅವರನ್ನು ಹೈಕೋರ್ಟ್ (Karnataka High Court) ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಶಾಸಕ ಹರೀಶ್ ಪೂಂಜಾ ವಿರುದ್ಧ, ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನು ನಿಂದಿಸಿ, ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಆರೋಪದಡಿ ದಾಖಲಾದ ಎಫ್‍ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಅಸಮಾಧಾನ ಹೊರಹಾಕಿದೆ. ಇದನ್ನೂ ಓದಿ: ಕೊನೆಗೂ ಉರುಳಿತ್ತು ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್‌: ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ

https://youtu.be/7yBIMPkTX5U?si=-EqSe84Nmd_uCAWN

ಪೊಲೀಸ್ ಠಾಣೆಗೆ ಏಕೆ ಹೋಗಿದ್ದು? ಶಾಸಕರಾದ ಮಾತ್ರಕ್ಕೆ ಠಾಣೆಗೆ ಹೋಗಿ ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸಬಹುದೇ? ಭಯೋತ್ಪಾದಕರನ್ನು ಪೊಲೀಸರು ಹಿಡಿದು ತಂದರೆ, ಆಗಲೂ ಪೊಲೀಸ್ ಠಾಣೆಗೆ ಹೋಗಿ ಪೊಲೀಸರನ್ನು ಪ್ರಶ್ನೆ ಮಾಡುವಿರಾ? ಇದನ್ನೆಲ್ಲಾ ಒಪ್ಪಲು ಆಗುವುದಿಲ್ಲ. ನಾಳೆ ನ್ಯಾಯಾಧೀಶರು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು ನೋಡಲು ಕೋರ್ಟ್ ಬಂದು ನಮ್ಮ ಮುಂದೆ ಕುಳಿತರೆ ಹೇಗೆ? ಆಗ ಏನು ಮಾಡುವುದು ಎಂದು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಖಾರವಾಗಿ ಪ್ರಶ್ನಿಸಿದೆ. ಇದನ್ನೂ ಓದಿ: ತಿರುಪತಿಗೆ ಭೇಟಿ ನೀಡಿದ ಅಮಿತ್‌ ಶಾ ದಂಪತಿ

https://youtu.be/NjDFYrxzGPQ?si=_hfH-RwF_ssO4EEA

ಶಾಸಕರು ಇರೋದು ಶಾಸನ ರೂಪಿಸಲು. ಅದರಂತೆ ಶಾಸನ ರಚನೆ ಮಾಡುವುದಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು. ಅದುಬಿಟ್ಟು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವುದಲ್ಲ ಎಂದು ಪೀಠ ಹೇಳಿದೆ. ನಂತರ ಅರ್ಜಿಯಲ್ಲಿ ಪ್ರತಿವಾದಿಯಾದ ಬೆಳ್ತಗಂಡಿ ಠಾಣಾ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: ರಾಜ್ಯದಲ್ಲಿ ನಾಳೆಯಿಂದ 5 ದಿನ ಮದ್ಯ ಮಾರಾಟ ಬಂದ್‌!

https://youtu.be/Ic8UB2mCBrU?si=HhZKF4WwJ_gPCvTr

ಏನಿದು ಪ್ರಕರಣ?: ಪರವಾನಗಿ ಪಡೆಯದೇ ಗಣಿಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದರು. ಪೊಲೀಸರ ಕ್ರಮ ಆಕ್ಷೇಪಿಸಿ ಠಾಣೆಗೆ ನುಗ್ಗಿ ಪೊಲೀಸರನ್ನು ನಿಂದಿಸಿ, ಬೆದರಿಕೆ ಹಾಕಿ ಹಾಗೂ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ರದ್ದುಗೊಳಿಸುವಂತೆ ಶಾಸಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವೈದ್ಯಕೀಯ ಪರೀಕ್ಷೆಯಿಂದಾಗಿ ಇತರೆ ರೋಗಿಗಳಿಗೆ ಸಮಸ್ಯೆ- ಆಸ್ಪತ್ರೆಯಲ್ಲಿ ಸಾರ್ವಜನಿಕರ ಪರದಾಟ

Share with Friends
author avatar
News Desk