Latestಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಬಿಜೆಪಿ ವಿರುದ್ಧ 40% ಕಮಿಷನ್ ಭ್ರಷ್ಟಾಚಾರ ಜಾಹೀರಾತು ಕೇಸ್ ನಲ್ಲಿ ಸಿಎಂ, ಡಿಸಿಎಂಗೆ ಜಾಮೀನು

ಬೆಂಗಳೂರು: ಬಿಜೆಪಿ ವಿರುದ್ಧ 40% ಭ್ರಷ್ಟಾಚಾರ (40% Commission) ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ್ದಕ್ಕೆ ಕಾನೂನು ಸಂಘರ್ಷ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಜಾಮೀನು ಮಂಜೂರಾಗಿದೆ.

ಕಾಂಗ್ರೆಸ್, ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಜಾಹೀರಾತು ಪ್ರಕಟಿಸಿತ್ತು. ಇದರಿಂದಾಗಿ ಬಿಜೆಪಿ, ಕಾಂಗ್ರೆಸ್‌ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿತ್ತು. ಈ ಕೇಸಿನ ಹಿನ್ನೆಲೆ ಇಂದು ಸಿಎಂ ಮತ್ತು ಡಿಸಿಎಂ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗಿ ಸಾಮಾನ್ಯರಂತೆ ನ್ಯಾಯಲಯದ ಹೊರಗಡೆ ಕುಳಿತ್ತಿದ್ದರು. ನಾಯಕರ ಪರವಾಗಿ ಪರವಾಗಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಹಮ್ಮದ್ ಹಾಜರಿದ್ದರು. ಬಿಜೆಪಿ ಪರವಾಗಿ ವಕೀಲ ವಿನೋದ್ ಕುಮಾರ್ ಹಾಜರಾಗಿದ್ದರು. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಲೆಕ್ಕಾಧಿಕಾರಿ ಎಸ್‌ಐಟಿ ವಶ

https://youtu.be/r32NMq7j5QU?si=dzmhEeshVRhku2Rs

ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಚುನಾವಣೆ ಸಮಯದಲ್ಲಿ ಬಿಜೆಪಿ ಸರ್ಕಾರದ ಮೇಲೆ ಮಾಡಿದ್ದ ಭ್ರಷ್ಟಾಚಾರ ಆರೋಪವನ್ನು ಆಗ ಕಾಂಗ್ರೆಸ್ ಮಾಡಿತ್ತು. ಕಾಂಗ್ರೆಸ್ ವಿರುದ್ಧ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕೇಶವ್ ಪ್ರಸಾದ್ ದೂರು ದಾಖಲಿಸಿದ್ದರು. ಇದನ್ನೂ ಓದಿ: ಪೋರ್ಶೆ ಕಾರು ಅಪಘಾತ ಪ್ರಕರಣ-ಆರೋಪಿ ಅಪ್ರಾಪ್ತನ ತಾಯಿ ಬಂಧನ

https://youtu.be/Xmp5YfB-Rt4?si=enfHblopENVknI8r

ಪ್ರಕರಣ ಸಂಬಂಧ ಸಿಎಂ, ಡಿಸಿಎಂಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ ಆಗಿತ್ತು. ಇದನ್ನೂ ಓದಿ: ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್‌ ಬೆಲೆಯಲ್ಲಿ 69.50 ರೂ. ಇಳಿಕೆ

Share with Friends
author avatar
News Desk