BlogLatestರಾಜಕೀಯ | Politicsರಾಜ್ಯ-Karnataka

ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರೂ ಕ್ಷೇತ್ರದಲ್ಲಿ ಗೆಲ್ಲಲಿದೆ : ಡಿಕೆಶಿ ಭವಿಷ್ಯ

ಬೆಂಗಳೂರು: ಉಪಚುನಾವಣೆಗೆ ಘೋಷಣೆಯಾದ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು ಆಡಳಿತಾರೂಢ ಕಾಂಗ್ರೆಸ್ ಮೂರು ಕ್ಷೇತ್ರಗಳನ್ನು ಗೆದ್ದು ತನ್ನ ಆಡಳಿತ ವಿರೋಧಿ ಹಣೆಪಟ್ಟಿಯನ್ನು ಕಳಚಿಕೊಳ್ಳಲು ಸಿದ್ಧವಾಗಿದೆ.

ಉಪಚುನಾವಣೆ ಕುರಿತು ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಉಪಚುನಾವಣೆ ಘೋಷಣೆಯಾಗಿದ್ದು, ಆಯೋಗ ಚುನಾವಣಾ ದಿನಾಂಕ ಘೋಷಣೆ ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಕಾಂಗ್ರೆಸ್ ಪಕ್ಷ ಮೂರೂ ಕ್ಷೇತ್ರ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಆಯೋಗ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಿಸಿದ್ದು, ಉಪಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಗೂ ಕಾಂಗ್ರೆಸ್ ಪಕ್ಷ ಸಜ್ಜಾಗಿದೆ. ಮೂರು ಕ್ಷೇತ್ರಗಳಲ್ಲೂ ನಾವು ಗೆದ್ದೇ ಗೆಲ್ಲುತ್ತೇವೆ ಎಂದಿದ್ದಾರೆ.

ಈ ಕ್ಷೇತ್ರಗಳಲ್ಲಿ ಶಾಸಕ ಸ್ಥಾನ ಖಾಲಿಯಾದಾಗಿನಿಂದಲೇ ನಮ್ಮ ತಯಾರಿ ಆರಂಭವಾಗಿದೆ. ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ ಎಂದರು. ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಈ ಚುನಾವಣೆಗಳಲ್ಲಿ ನಾವೇ ಅಭ್ಯರ್ಥಿಗಳು ಎಂದು ಮಾರ್ಮಿಕವಾಗಿ ಪ್ರತಿಕ್ರಿಯಿಸಿದರು.

Share with Friends
author avatar
News Desk