BlogLatestTop Storiesರಾಜಕೀಯ | Politics

ಚನ್ನಪಟ್ಟಣ ಉಪಚುನಾವಣೆ : ದೋಸ್ತಿಗಳಿಗೆ ತಲೆನೋವಾದ ಯೋಗೇಶ್ವರ್ ಹೇಳಿಕೆ

ಬೆಂಗಳೂರು : ನಾನು ಚನ್ನಪಟ್ಟಣ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕು ಎನ್ನುವ ಆಸೆ ಇದೆ. ಒಂದು ವೇಳೆ ಅದು ಸಾಧ್ಯ ವಾಗಿಲ್ಲ ಅಂದರೆ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎನ್ನುವ ಮೂಲಕ ಸಿಪಿ ಯೋಗೇಶ್ವರ್ ಜೆಡಿಎಸ್-ಬಿಜೆಪಿ ದೋಸ್ತಿಗಳ ಕಿತ್ತಾಟಕ್ಕೆ ಕಾರಣವಾಗುವ ಅಂಭಾವವಿದೆ.

ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕು ಎನ್ನುವ ಆಸೆ ಇದೆ. ಒಂದುವೇಳೆ ಅದು ಸಾಧ್ಯ ವಾಗಿಲ್ಲ ಅಂದರೆ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಈಗಾಗಲೇ ನಮ್ಮ ಕ್ಷೇತ್ರದ ಜನರು ಹಲವು ಬಾರಿ ಸ್ವತಂತ್ರವಾಗಿ ನಿಂತರೂ ನನ್ನನ್ನು ಗೆಲ್ಲಿಸಿದ್ದಾರೆ. ಮೈತ್ರಿ ಅಭ್ಯರ್ಥಿಯಾಗಲು ಸಾಧ್ಯವಿಲ್ಲ ಎಂದಾದರೆ ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಹೊರತು ಕಾಂಗ್ರೆಸ್‌ಗೆ ಸೇರಲ್ಲ. ಇದುವರೆಗೆ ನನ್ನನ್ನು ಯಾವುದೇ ಕಾಂಗ್ರೆಸ್ ನಾಯಕರು ಸಂಪರ್ಕಿಸಿಲ್ಲ ಎಂದು ಯೋಗೇಶ್ವರ್‌ ಸ್ಪಷ್ಟಪಡಿಸಿದರು.

ನಾನು ಚನ್ನಪಟ್ಟಣ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಅಲ್ಲಿ ಸ್ಪರ್ಧಿಸುವಂತೆ ಜನರು ಕೂಡ ಒತ್ತಡ ಹಾಕುತ್ತಿದ್ದಾರೆ. ನಾವೆಲ್ಲರೂ ಸಮಾನ ಮನಸ್ಕರು ಸಭೆ ಸೇರಿದ್ದೇವೆ. ಯಾವುದೇ ಕಾರಣಕ್ಕೂ ಚನ್ನಪಟ್ಟಣ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟು ಕೊಡಬಾರದು. ಆ ಕ್ಷೇತ್ರವನ್ನು ಎನ್‌ಡಿಎ ವಶಕ್ಕೆ ತಗೊಳ್ಳಬೇಕು ಎಂದು ನಿರ್ಣಯಿಸಿದ್ದೇವೆ. ಇದೇ ಕಾರಣಕ್ಕೆ ನಾನು ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮನಸ್ಸು ಮಾಡಿದ್ದೇನೆ. ಅದಕ್ಕಾಗಿ ಇಂದು ದಿಲ್ಲಿಗೆ ತೆರಳುತ್ತಿದ್ದೇನೆ. ಅಲ್ಲಿ ವರಿಷ್ಠರನ್ನು ಭೇಟಿಯಾಗಿ ಚರ್ಚೆ ನಡೆಸುತ್ತೇನೆ. ಆಗಸ್ಟ್ 16ರಂದು ಮತ್ತೆ ದಿಲ್ಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗುವ ಯೋಜನೆಯೂ ಇದೆ ಎಂದರು.

ಈಗಾಗಲೇ ನಮ್ಮ ರಾಜ್ಯ ನಾಯಕರು ಕೂಡ ನನ್ನ ಸ್ಪರ್ಧೆಯ ಬಗ್ಗೆ ಭರವಸೆ ನೀಡಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಸ್ವಲ್ಪ ಮುಂಗೋಪ ಅಷ್ಟೇ. ಆದರೆ ಅಂತಿಮವಾಗಿ ಅವರ ಜತೆ ವರಿಷ್ಠರು ಮಾತಾಡಿದ ಬಳಿಕ ನನ್ನ ಸ್ಪರ್ಧೆಗೆ ಅವರೂ ಒಪ್ಪಿಗೆ ಸೂಚಿಸುವ ಭರವಸೆ ಇದೆ. ಕಳೆದ ಬಾರಿ ಮೈತ್ರಿ ಮಾಡಿಕೊಳ್ಳುವಂತೆ ಹೇಳಿದವನೇ ನಾನು. ಬಿಜೆಪಿ ಮೈತ್ರಿ ಮಾಡಿಕೊಳ್ಳದಿದ್ದರೆ ನಮ್ಮ ಭಾಗದಲ್ಲಿ ಜೆಡಿಎಸ್ ಕಥೆ ಏನಾಗುತ್ತಿತ್ತು? ಹೀಗಾಗಿ ಎರಡು ಪಕ್ಷಗಳ ಒಮ್ಮತದ ಅಭ್ಯರ್ಥಿ ನಾನೇ ಆಗುವ ವಿಶ್ವಾಸ ಇದೆ ಎಂದು ಹೇಳಿದರು.

Share with Friends
author avatar
News Desk