Crime NewsEntertainmentLatestಬೆಂಗಳೂರು-Bengaluruರಾಜ್ಯ-Karnatakaಸ್ಯಾಂಡಲ್​ವುಡ್-Sandalwood

ದಾಸನಿಗೆ ಜೈಲು ಉಟದಿಂದ ಫುಡ್ ಪಾಯಿಸನ್ – ಮನೆ ಊಟ ಬೇಕೆಂದು ಹೈಕೋರ್ಟ್‌ಗೆ ದರ್ಶನ್ ಅರ್ಜಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ (Renukaswamy Murder Case) ಸಂಬಂಧ ಜೈಲು ಸೇರಿರುವ ನಟ ದರ್ಶನ್ (Darshan) ಮನೆಯ ಊಟ ಬೇಕೆಂದು ಹೈಕೋರ್ಟ್‌ಗೆ (High Court) ರಿಟ್ ಅರ್ಜಿ ಸಲ್ಲಿಸಿದ್ದಾರೆ.

ವಕೀಲ ಪ್ರವೀಣ್ ತಮ್ಮಯ್ಯ ಮೂಲಕ ದರ್ಶನ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದಲ್ಲದೇ ಹಾಸಿಗೆ, ಪುಸ್ತಕ ಪಡೆಯಲು ಅನುಮತಿ ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ತುರ್ತು ವಿಚಾರಣೆಗೆ ತೆಗೆದುಕೊಳ್ಳುವಂತೆ ವಕೀಲರು ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಎಫ್‌ಐಆರ್

https://youtu.be/Z9guiREBeLU?si=PO_8tR4Aw8QLbu8q

ಜೈಲಿನಲ್ಲಿ ನೀಡುತ್ತಿರುವ ಊಟ ಜೀರ್ಣವಾಗುತ್ತಿಲ್ಲ. ಜೈಲಿನ ಊಟ ತಿಂದಾಗ ಅತಿಸಾರ, ಭೇದಿ ಆಗುತ್ತಿದೆ. ಜೈಲಿನ ಆಹಾರ ಒಗ್ಗದೇ ಫುಡ್ ಪಾಯಿಸನಿಂಗ್ ಆಗುತ್ತಿದೆ. ಹೀಗೆಂದು ಜೈಲಿನ ವೈದ್ಯರೇ ಮಾಹಿತಿ ನೀಡಿದ್ದಾರೆ ಎಂದು ದರ್ಶನ್ ಹೈಕೋರ್ಟ್‌ಗೆ ಕಾರಣಗಳನ್ನು ನೀಡಿದ್ದಾರೆ.

https://youtu.be/3EjLAOOE9Ss?si=sqGC4mOvo_D5vlSk

ಗುರುವಾರ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ. ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಲಿದ್ದಾರೆ. ಇದನ್ನೂ ಓದಿ: ಹಾತ್ರಾಸ್ ಕಾಲ್ತುಳಿತ ಪ್ರಕರಣ: ಎಸ್‌ಡಿಎಂ, ತಹಸೀಲ್ದಾರ್ ಸೇರಿದಂತೆ ಹಲವು ಅಧಿಕಾರಿಗಳ ಅಮಾನತು

Share with Friends
author avatar
News Desk