Latestರಾಷ್ಟ್ರೀಯ-National

ದೆಹಲಿ ಮದ್ಯ ಹಗರಣ – ಬಿಆರ್‌ಎಸ್ ನಾಯಕಿ ಕವಿತಾ ನ್ಯಾಯಾಂಗ ಬಂಧನ ಜುಲೈ 3 ವರೆಗೆ ವಿಸ್ತರಣೆ

ನವದೆಹಲಿ: ಬಿಆರ್‌ಎಸ್ (BRS) ನಾಯಕಿ ಕೆ.ಕವಿತಾ (K Kavitha) ಅವರ ನ್ಯಾಯಾಂಗ ಬಂಧನವನ್ನು (Judicial Custody) ದೆಹಲಿ ನ್ಯಾಯಾಲಯ ಜುಲೈ 3 ರವರೆಗೆ ವಿಸ್ತರಿಸಿದೆ.

ದೆಹಲಿ ಮದ್ಯದ ಹಗರಣಕ್ಕೆ ಸಂಭಂದಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕವಿತಾ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಮಳೆಗಾಲ ಆರಂಭ – ಹೆಚ್ಚಾದ ಹಾವುಗಳ ಕಾಟ

https://youtu.be/r32NMq7j5QU?si=KRpwJMzXHT2kahzU

ಇದೇ ಪ್ರಕರಣದ ಇತರ ಮೂವರು ಆರೋಪಿಗಳಾದ ರಾಜಕುಮಾರ್, ಅರವಿಂದ್ ಮತ್ತು ದಾಮೋದರ್ ಅವರಿಗೆ ರೋಸ್ ಅವೆನ್ಯೂ ನ್ಯಾಯಾಲಯವು 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ಮಂಜೂರು ಮಾಡಿದೆ.

ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಮೇ 15ರಂದು ಕವಿತಾ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಕವಿತಾ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿದ ಸಿಬಿಐ ಮತ್ತು ಇಡಿ, ಕವಿತಾ ಅವರು ಹೆಚ್ಚು ಪ್ರಭಾವಿ ಮತ್ತು ಶಕ್ತಿಯುತರಾಗಿದ್ದು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಹೇಳಿತ್ತು. ಇದನ್ನೂ ಓದಿ: ಒಡಿಶಾದಲ್ಲಿ ಹೆಚ್ಚಿದ ತಾಪಮಾನ – ಹೀಟ್‌ಸ್ಟ್ರೋಕ್‌ಗೆ 20 ಮಂದಿ ಸಾವು

https://youtu.be/yT8_wXTi9wQ?si=h6epTvnriUQ8zhIj

ದೆಹಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿ ಒಟ್ಟು 18 ಮಂದಿಯನ್ನು ಇಡಿ ಬಂಧಿಸಿದೆ. ಇದನ್ನೂ ಓದಿ: ಗ್ರಾಹಕರಿಗೆ ಶಾಕ್‌ – ಇಂದಿನಿಂದ ಮದರ್ ಡೈರಿ ಹಾಲಿನ ದರ ಹೆಚ್ಚಳ

Share with Friends
author avatar
News Desk