Crime NewsLatestಗದಗ-Gadagರಾಜ್ಯ-Karnataka

ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಗದಗ: ಮಲಗಿದ್ದಲ್ಲೇ ಇಂದೇ ಕುಟುಂಬದ ನಾಲ್ವರ ಭೀಕರ ಹತ್ಯೆಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದ್ದು, ಸಾರ್ವಜನಿಕರನ್ನು ಬೆಚ್ಚಿಬೀಳುವಂತೆ ಮಾಡಿದೆ.

ಜೆಲಕ್ಲೆಯ ಬೇಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27) , ಪರಶುರಾಮ (55) ಪತ್ನಿ ಲಕ್ಷಿö್ಮ (45) ಪುತ್ರಿ ಆಕಾಂಕ್ಷಾ (16) ಕೊಲೆಯಾಗಿದ ದುರ್ದೈವಿಗಳು. ಕೊಲೆ ಮಾಡಿದ್ದ ಆರೋಪಿಗಳು ಪರಾರಿಯಾಗಿದ್ದು ಅವರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ:  ಇಂದು ಮೊದಲ ಅಂತದ ಮತದಾನ

https://youtu.be/RLABPlUFGgU?si=Sz5Sv37czPevKXX2

,ಮೃಥ ನ್ವಾಲರ ಪೈಕಿ ಮೂವರು ದಾಸರ ಓಣೀಯಲ್ಲಿ ತಮ್ಮ ಮನೆಯ ಮೊದಲಿ ಮಹಡಿಯಲ್ಲಿ ಮಲಿಗಿದ್ದರು. ಈ ಮೂವರು ಮೂಲತಃ ಕೊಪ್ಪಳ ಜಿಲ್ಲೆಯವರಾಗಿದ್ದು, ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್‌ನ ಮದುವೆಗೆಂದು ಬಂದಿದ್ದರು. ಇದನ್ನೂ ಓದಿ:  ಕಾಲೇಜ್ ಕ್ಯಾಂಪಸ್‌ನಲ್ಲಿ ಕಾರ್ಪೊರೇಟರ್ ಮಗಳ ಭೀಕರ ಹತ್ಯೆ

ಇನ್ನು ದುಷ್ಕರ್ಮಿಗಳು ಕೊಲೆಗೆ ಬಳಸಿದ್ದ ಮಾರಕಾಸ್ತ್ರಗಳನ್ನು ಚರಂಡಿಯಲ್ಲಿ ಎಸೆದು ಹೋಗಿರುವುದು ತನಿಖೆ ವೇಳೆ ಪತ್ತೆಯಾಗಿದೆ. ಪ್ರಕರಣ ಕುರಿತು ಮಾಹಿತಿ ನೀಡಿರುವ ಬಿ.ಎಸ್ ನೇಮಗೌಡ ಅವರು, ಮಧ್ಯರಾತ್ರಿ ನಾಲ್ವರ ಕೊಲೆಯಾಗಿದೆ. ಕುಟುಂಬಸ್ಥರು ಹೇಳುವ ಪ್ರಕಾರ ತಡರಾತ್ರಿ ರಾತ್ರಿ 2 ರಿಂದ 3 ಗಂಟೆ ಸಮಯದಲ್ಲಿ ಕೊಲೆ ಆಗಿದೆ. ಮಾರಕಾಸ್ತ್ರಗಳಿಂದ ಹತ್ಯೆಯಾಗಿದೆ. ಮೊದಲಿಗೆ ಹಂತಕರು ಬಾಗಿಲು ಬಡಿದಿದ್ದಾರೆ, ಯಾರೊಬ್ಬರೂ ಬಾಗಿಲು ತೆರೆಯದ ಕಾರಣ ಅವರು, ಮಹಡಿಯಿಂದ ಬಂದು ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ ಹಂತಕರು ಯಾರು ಅನ್ನೋದು ತಿಳಿದುಬಂದಿಲ್ಲ. ಆದಷ್ಟು ಬೇಗ ಅವರನ್ನ ಪತ್ತೆಹಚ್ಚಿ, ಬಂಧಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಮದ್ಯ ನೀತಿ ಹಗರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

https://youtu.be/n6TR5sFjO68?si=IzeN7GRX8k0iYgMg

Share with Friends
author avatar
News Desk