Latestಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹೆಚ್‌ಡಿಕೆ

ಬೆಂಗಳೂರು: ಸಂಸತ್ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಚನ್ನಪಟ್ಟಣ (Channapatna) ವಿಧಾನಸಭೆ ಕ್ಷೇತ್ರದ ಶಾಸಕ ಸ್ಥಾನಕ್ಕೆ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ರಾಜೀನಾಮೆ ನೀಡಿದ್ದಾರೆ.

ಇಂದು ಬೆಳಗ್ಗೆ ಸ್ಪೀಕರ್ ಯಟಿ ಖಾದರ್ (UT Khader) ಕೊಠಡಿಗೆ ಆಗಮಿಸಿದ ಕುಮಾರಸ್ವಾಮಿ ಅವರು ರಾಜೀನಾಮೆ ಸಲ್ಲಿಸಿದರು. ರಾಜೀನಾಮೆ ಸಲ್ಲಿಸುವ ವೇಳೆ ಜಿಟಿ ದೇವೇಗೌಡ, ಭೋಜೇಗೌಡರು ಉಪಸ್ಥಿತರಿದ್ದರು. ಇದನ್ನೂ ಓದಿ: ಅಭಿಮಾನಿಗಳನ್ನು ಬಳಸಿಕೊಂಡು ಕೊಲೆ ಮಾಡುವುದು ಎಷ್ಟು ಸರಿ? – ರಮ್ಯಾ

https://youtu.be/XZ2FfvY4KTI?si=gzU4-FfdFasIyODb

ಲೋಕಸಭಾ ಚುನಾವಣೆಯಲ್ಲಿ (Lok Sabha Election) ಮಂಡ್ಯದಿಂದ (Mandya) ಗೆದ್ದ ಕುಮಾರಸ್ವಾಮಿ ಮೋದಿ ಸಂಪುಟದಲ್ಲಿ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರಾಗಿ ನೇಮಕವಾಗಿದ್ದಾರೆ. ಇದನ್ನೂ ಓದಿ: ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಹೆಚ್‌ಡಿಕೆ

https://youtu.be/im3A26aei2Q?si=GUWVeZnSUL4p1BkQ

ಇಂದು ರಾಜೀನಾಮೆ ನೀಡುವ ಮೊದಲು ಬೆಳಗ್ಗೆ ಕುಮಾರಸ್ವಾಮಿ ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಪಡೆದಿದ್ದರು. ಈ ವೇಳೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ನನಗೆ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಕೇಂದ್ರ ಸರ್ಕಾರದ ಸಚಿವನಾಗಿ ನನ್ನ ಕೆಲಸ ಯಶಸ್ವಿಯಾಗಲು ವೆಂಕಟೇಶ್ವರನ ಆಶೀರ್ವಾದ ಪಡೆಯಲು ನಾನು ಬಂದಿದ್ದೇನೆ ಎಂದು ಹೇಳಿದ್ದರು. ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ – 2 ಎಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ

https://youtu.be/P5XzuqMQDeI?si=HW9xQnLIV7aBRcKr
Share with Friends
author avatar
News Desk