Latestರಾಜಕೀಯ | Politicsರಾಷ್ಟ್ರೀಯ-National

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಹೆಚ್‌ಡಿಕೆ

ತಿರುಪತಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ (Tirupati Temple) ತೆರಳಿ ದೇವರ ದರ್ಶನ ಮಾಡಿದ್ದಾರೆ.

ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸುಪ್ರಭಾತ ಸೇವೆಗಾಗಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ನನಗೆ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಕೇಂದ್ರ ಸರ್ಕಾರದ ಸಚಿವನಾಗಿ ನನ್ನ ಕೆಲಸ ಯಶಸ್ವಿಯಾಗಲು ವೆಂಕಟೇಶ್ವರನ ಆಶೀರ್ವಾದ ಪಡೆಯಲು ನಾನು ಬಂದಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ – 2 ಎಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ

https://youtu.be/im3A26aei2Q?si=LSUC9iNtmGnWystw

ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಶುಕ್ರವಾರ ಕುಮಾರಸ್ವಾಮಿ ಬೆಂಗಳೂರಿಗೆ ಶುಕ್ರವಾರ ಆಗಮಿಸಿದರು. ತಿರುಪತಿಯಿಂದ ಇಂದು ಮರಳಿದ ಬಳಿಕ ಸ್ಪೀಕರ್‌ ಕಚೇರಿಗೆ ತೆರಳಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಲಿದ್ದಾರೆ. ಇದನ್ನೂ ಓದಿ: ಚಲನಚಿತ್ರ ವಾಣಿಜ್ಯ ಮಂಡಳಿ ಇಂದು ರೇಣುಕಾಸ್ವಾಮಿ ಮನೆಗೆ ಭೇಟಿ

https://youtu.be/XZ2FfvY4KTI?si=FMgetV8PprylwNUz
Share with Friends
author avatar
News Desk