Latestರಾಷ್ಟ್ರೀಯ-National

ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೋರೆನ್ ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ

ರಾಂಚಿ: ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ (Heman Soren) ಇಂದು ಸಂಜೆ ಜಾರ್ಖಂಡ್‌ನ 13ನೇ ಮುಖ್ಯಮಂತ್ರಿಯಾಗಿ (Chief Minister) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಭೂ ಹಗರಣ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿಯಾಗಿರುವ ಹೇಮಂತ್ ಸೋರೆನ್ ಸುಮಾರು 5 ತಿಂಗಳು ಜೈಲು ಸೇರಿ ಏದು ವರ್ಷ ಶಿಕ್ಷೆ ಅನುಭವಿಸಿದ ನಂತರ ಇದೀಗ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಜಾರ್ಖಂಡ್ ರಾಜ್ಯಪಾಲರಾದ ಸಿ.ಪಿ ರಾಧಾಕೃಷ್ಣನ್ ಅವರು ಇಂದು ಸಂಜೆ 5 ಗಂಟೆಗೆ ರಾಜಭವನದಲ್ಲಿ ಹೇಮಂತ್ ಸೊರೆನ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: 10 ವರ್ಷದ ಬಾಲಕಿ ಮೇಲೆ 10 ಮಂದಿ ಗ್ಯಾಂಗ್‌ರೇಪ್‌- ಆರೋಪಿಗಳ ಬಂಧನ

https://youtu.be/99zqWWslwwE?si=bUvExoemOjZwgKAa

ಹೇಮಂತ್ ಸೊರೆನ್‌ ಅವರ ಬಂಧನದ ನಂತರ ಫೆಬ್ರವರಿ 2ರಂದು ಜಾರ್ಖಂಡ್‌ನ 12ನೇ ಮುಖ್ಯಮಂತ್ರಿಯಾಗಿ ಸ್ವೀಕರಿಸಿದ ಚಂಪೈ ಸೊರೆನ್ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಅವರು ಸಹ ರಾಜೀನಾಮೆ ನೀಡಿದ ನಂತರ ಜೆಎಂಎಂ ಮುಖ್ಯಸ್ಥ ಹೇಮಂತ್ ಸೋರೆನ್ ಬುಧವಾರ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.

ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೆಎಂಎಂ ಮುಖ್ಯಸ್ಥ ಶಿಬು ಸೊರೆನ್ ಅವರ ಪುತ್ರ ಹೇಮಂತ್ ಸೊರೆನ್ ಅವರು ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದ ಹಿನ್ನೆಲೆ ಜೂನ್ 28ರಂದು ಜೈಲಿನಿಂದ ಬಿಡುಗಡೆಗೊಂಡರು. ರಾಜ್ಯದಲ್ಲಿ ಜೆಎಂಎಂ ನೇತೃತ್ವದ ಮೈತ್ರಿಕೂಟವು ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದೆ. ಇದನ್ನೂ ಓದಿ: ಒಂದು ವರ್ಷದ ಮಗುವನ್ನ ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ

https://youtu.be/99zqWWslwwE?si=pntUWQ3DjKvzmvIe

ಜಾರಿ ನಿರ್ದೇಶನಾಲಯದಿಂದ ಜನವರಿ 31ರಂದು ಬಂಧಿಸುವ ಮುನ್ನವೇ ಹೇಮಂತ್ ಸೋರೆನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೇಮಂತ್ ಸೊರೆನ್‌ಗೆ ಜಾಮೀನು ಮಂಜೂರು ಮಾಡಿದ ಜಾರ್ಖಂಡ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯವು ಶೀಘ್ರದಲ್ಲೇ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವ ನಿರೀಕ್ಷೆಯಿದೆ ಎಂದು ನವದೆಹಲಿಯ ಅಧಿಕೃತ ಮೂಲಗಳು ತಿಳಿಸಿವೆ.

ಲೋಕಸಭೆ ಚುನಾವಣೆಯ ನಂತರ ರಾಜ್ಯದಲ್ಲಿ ಜೆಎಂಎಂ ನೇತೃತ್ವದ ಮೈತ್ರಿಕೂಟದ ಬಲ 45 ಶಾಸಕರಿಗೆ ಇಳಿಯಿತು. ಜೆಎಂಎಂ-27, ಕಾಂಗ್ರೆಸ್-17 ಮತ್ತು ಆರ್‌ಜೆಡಿ-1 ಸ್ಥಾನವನ್ನು ಹೊಂದಿದೆ. ಇದನ್ನೂ ಓದಿ: ದರ್ಶನ್‌ ಬಂಧನ ಬಳಿಕ ಮೊದಲ ಬಾರಿಗೆ ಸುಮಲತಾ ಪ್ರತಿಕ್ರಿಯೆ

https://youtu.be/99zqWWslwwE?si=0jlOiu09QNrici7S

ಇದಕ್ಕೂ ಮುನ್ನ ಜೆಎಂಎಂ ಪ್ರಧಾನ ಕಾರ್ಯದರ್ಶಿ ಸುಪ್ರಿಯೋ ಭಟ್ಟಾಚಾರ್ಯ ಅವರು ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ಜುಲೈ 7ರಂದು ನಡೆಯಲಿದೆ ಎಂದು ತಿಳಿಸಿದ್ದರು. ರಾಜ್ಯಪಾಲರು ನಮಗೆ ಸರ್ಕಾರ ರಚಿಸಲು ಮತ್ತು ಪ್ರಮಾಣ ವಚನ ಸ್ವೀಕರಿಸಲು ಆಹ್ವಾನಿಸಿದ್ದಾರೆ. ಈ ಕ್ಯಾಬಿನೆಟ್‌ನೊಂದಿಗೆ ಸಿಎಂ ಜುಲೈ 7ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಆ ಸಮಾರಂಭ ಕೊನೆ ಕ್ಷಣದಲ್ಲಿ ಇಂದೇ ನಿಗದಿಯಾಗಿದೆ. ಇದನ್ನೂ ಓದಿ: ಎಲ್ಲ ಪ್ರಕರಣವನ್ನು ಸಿಬಿಐಗೆ ಕೊಡಲು ಸಾಧ್ಯವಿಲ್ಲ: ಪರಂ

Share with Friends
author avatar
News Desk